AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್: ಎಂಟು ಮಕ್ಕಳಿಗೆ ಗಾಯ

ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್: ಎಂಟು ಮಕ್ಕಳಿಗೆ ಗಾಯ

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jul 10, 2026 | 2:31 PM

Share

ಮುಖ್ಯಾಂಶಗಳು

  • ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್​​ ಅಪಘಾತ
  • ಮಣಿಪಾಲ ಸಮೀಪದ ಕೊಡಂಗೆಯಲ್ಲಿ ನಡೆದ ಘಟನೆ
  • ಅಪಘಾತದಲ್ಲಿ ಒಟ್ಟು ಎಂಟು ಜನ ಮಕ್ಕಳಿಗೆ ಗಾಯ

School Bus Accident in Udupi: ಉಡುಪಿಯ ಮಣಿಪಾಲ ಸಮೀಪದ ಕೊಡಂಗೆಯಲ್ಲಿ ಶಾಲಾ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಘಟನೆ ಸಂಭವಿಸಿದೆ. ಮಣಿಪಾಲದ ಕ್ರಸ್ಟ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದ್ದು, ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಓರ್ವ ಮಗುವಿಗೆ ಗಂಭೀರ ಪೆಟ್ಟಾಗಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿ, ಜುಲೈ 10: ಮಣಿಪಾಲ ಸಮೀಪದ ಕೊಡಂಗೆಯಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದಿದೆ. ಈ ಅಪಘಾತದಲ್ಲಿ ಎಂಟು ಮಕ್ಕಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಣಿಪಾಲದ ಕ್ರಸ್ಟ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದ್ದು, ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಬಸ್ ರಸ್ತೆ ಪಕ್ಕದ ಕಂದಕಕ್ಕೆ ಮಗುಚಿಬಿದ್ದಿದೆ. ಅಪಘಾತದಲ್ಲಿ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ಮಗುವಿಗೆ ಹೆಚ್ಚಿನ ಪೆಟ್ಟಾಗಿದೆ. ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 10, 2026 02:18 PM

Follow Us