ಉಡುಪಿ: ತಂದೆಯ ಜೊತೆ ಸೇರಿ ಬೃಹತ್​ ಹೆಬ್ಬಾವು ಹಿಡಿದ ಮಗ; ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Nov 22, 2023 | 3:50 PM

ಖ್ಯಾತ ಉರಗತಜ್ಞ ಸುಧೀಂದ್ರ ಐತಾಳ್ ಜೊತೆ ಮಗ ಧೀರಜ್ ಎಂಬಾತ ತಂದೆಯ ಜೊತೆ ಸೇರಿ ಹೆಬ್ಬಾವ(Python)ನ್ನು ಹಿಡಿದಿದ್ದಾನೆ. ಬಾಲಕನ ಸಾಹಸದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಉಡುಪಿ, ನ.22: ಜಿಲ್ಲೆಯ ಬ್ರಹ್ಮಾವರ(Brahmavar) ತಾಲೂಕಿನ ಸಾಲಿಗ್ರಾಮದ ದೇವಾಡಿಗರಬೆಟ್ಟು ಗ್ರಾಮದಲ್ಲಿ ಬೃಹತ್​ ಹೆಬ್ಬಾವೊಂದು ಕಾನಿಸಿಕೊಂಡಿದೆ. ಖ್ಯಾತ ಉರಗತಜ್ಞ ಸುಧೀಂದ್ರ ಐತಾಳ್ ಜೊತೆ ಮಗ ಧೀರಜ್ ಎಂಬಾತ ತಂದೆಯ ಜೊತೆ ಸೇರಿ ಹೆಬ್ಬಾವ(Python)ನ್ನು ಹಿಡಿದಿದ್ದಾನೆ. ಬಾಲಕನ ಸಾಹಸದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ. ಇನ್ನು ಸುಧೀಂದ್ರ ಐತಾಳ್ ಅವರ ಮಗ ಧೀರಜ್ ಐತಾಳ್, ಏಳನೇ ತರಗತಿ ಕಲಿಯುತ್ತಿದ್ದಾನೆ. ಈಗಲೇ ತಂದೆಯ ಜೊತೆ ಸೇರಿ ಹಾವು ಹಿಡಿಯಲು ಮುಂದಾಗಿದ್ದು, ತಂದೆಯ ಹಾವು ಹಿಡಿಯುವ ಸಾಹಸ ಕಂಡು ಮಗನು ಹಾವು ಹಿಡಿಯಲು ಕೈಜೋಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More