ಹೊಸ ಪ್ರಯೋಗಕ್ಕೆ ಮುಂದಾದ ಉಡುಪಿ ಪ್ರವಾಸೋದ್ಯಮ ಇಲಾಖೆ: ಪ್ರವಾಸಿ ತಾಣಗಳ ಪ್ರಚಾರಕ್ಕೆ ಬ್ಲಾಗರ್​​ಗಳಿಗೆ ಆಹ್ವಾನ

Edited By:

Updated on: Feb 24, 2024 | 10:07 PM

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ದೇಶದ ನಾನಾ ಭಾಗಗಳಿಂದ ಬ್ಲಾಗರ್‌ಗಳನ್ನು ಆಹ್ವಾನಿಸಿ ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಗೆ ಹೆಮ್ಮೆ ತಂದಿರುವ ಪ್ರವಾಸಿ ತಾಣಗಳ ಬಗ್ಗೆ ದೇಶಾದ್ಯಂತ ಪ್ರಚಾರಪಡಿಸುವ ಮೂಲಕ ಪ್ರವಾಸಿಗರನ್ನು ಸೆಳೆಯಲು ಮುಂದಾಗಿದೆ.

ಉಡುಪಿ, ಫೆಬ್ರವರಿ 24: ಜಿಲ್ಲೆಯ ಪ್ರವಾಸೋದ್ಯಮ (Tourism Department) ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ದೇಶದ ನಾನಾ ಭಾಗಗಳಿಂದ ಬ್ಲಾಗರ್‌ಗಳನ್ನು ಆಹ್ವಾನಿಸಿ ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಗೆ ಹೆಮ್ಮೆ ತಂದಿರುವ ಪ್ರವಾಸಿ ತಾಣಗಳ ಬಗ್ಗೆ ದೇಶಾದ್ಯಂತ ಪ್ರಚಾರಪಡಿಸುವ ಮೂಲಕ ಪ್ರವಾಸಿಗರನ್ನು ಸೆಳೆಯಲು ಮುಂದಾಗಿದೆ. ಸತತ ಎರಡು ವರ್ಷಗಳಿಂದ ಈ ಪ್ರಯೋಗ ನಡೆಸುತ್ತಿದ್ದು ಪ್ರಸಿದ್ಧ ಬ್ಲಾಗರ್​ಗಳು ಉಡುಪಿ ಜಿಲ್ಲಾ ಪ್ರವಾಸಿ ತಾಣಗಳ ಸಂಚಾರ ಕೈಗೊಳ್ಳಲಿದ್ದಾರೆ. ವಿಶ್ವ ಪ್ರಸಿದ್ಧ ಕಡಲ ತೀರ ಮಲ್ಪೆಯಲ್ಲಿ ಈ ಬ್ಲಾಗರ್ ಮೀಟ್​ಗೆ ಚಾಲನೆ ನೀಡಲಾಯಿತು. ಮುಂದಿನ ಮೂರು ದಿನಗಳ ಕಾಲ ಮಲ್ಪೆ, ಸೈಂಟ್ ಮೇರಿಸ್ ದ್ವೀಪ, ಮಣಿಪಾಲದ ಹೆರಿಟೇಜ್ ವಿಲೇಜ್, ಕಟಪಾಡಿ ಕಂಬಳ ಸೇರಿದಂತೆ ವಿವಿಧ ಪ್ರವಾಸಿ ತಾಣಗಳು ಹಾಗೂ ಆಚರಣೆಗಳಲ್ಲಿ ಬ್ಲಾಗರ್​​ಗಳು ಭಾಗವಹಿಸಲಿದ್ದಾರೆ. ಈ ಮೂಲಕ ಕರಾವಳಿಯ ಕಂಪನ್ನು ದೇಶಾದ್ಯಂತ ಪಸರಿಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More