ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್, ವಿಡಿಯೋ ನೋಡಿ
ಯುಗಾದಿ ಮತ್ತು ರಂಜಾನ್ ಹಬ್ಬಗಳಿಂದಾಗಿ ಬೆಂಗಳೂರಿನಲ್ಲಿ ದೀರ್ಘ ರಜೆಗಳು ಘೋಷಣೆಯಾಗಿವೆ. ಇದರಿಂದಾಗಿ ಸಾವಿರಾರು ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದರಿಂದಾಗಿ ಗೋವರ್ಧನ್ ಥಿಯೇಟರ್ ಮತ್ತು ಗೊರಗುಂಟೆಪಾಳ್ಯದ ಬಳಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲು ಸಾಲು ನಿಂತಿವೆ ಮತ್ತು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನ ರಸ್ತೆಗಳು ಈ ಸಮಯದಲ್ಲಿ ತುಂಬಾ ತುಂಬಿಕೊಂಡಿವೆ.
ಬೆಂಗಳೂರು, ಮಾರ್ಚ್ 28: ಯುಗಾದಿ (Ugadi) ಮತ್ತು ರಂಜಾನ್ (Ramzan) ಹಬ್ಬ ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ (Bengaluru) ಜನರು ಸ್ವಂತ ವಾಹನಗಳಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದರಿಂದ ಗೋವರ್ಧನ್ ಥಿಯೇಟರ್, ಗೊರಗುಂಟೆಪಾಳ್ಯ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ. ಸವಾರರು ಪರದಾಡುತ್ತಿದ್ದಾರೆ.
Follow Us
Latest Videos

