AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional​: ಯುಗಾದಿಯ ಆಚರಣೆ ಹೇಗೆ ಮಾಡಬೇಕು? ಈ ವರ್ಷ ಯಾವೆಲ್ಲ ಬದಲಾವಣೆಗಳು?

Daily Devotional​: ಯುಗಾದಿಯ ಆಚರಣೆ ಹೇಗೆ ಮಾಡಬೇಕು? ಈ ವರ್ಷ ಯಾವೆಲ್ಲ ಬದಲಾವಣೆಗಳು?

ಅಕ್ಷಯ್​ ಪಲ್ಲಮಜಲು​​
|

Updated on: Mar 18, 2026 | 6:48 AM

Share

ಯುಗಾದಿ ಹಬ್ಬವು ಭಾರತೀಯ ಸಂಸ್ಕೃತಿಯಲ್ಲಿ ಹೊಸ ವರ್ಷದ ಆರಂಭವನ್ನು ಸೂಚಿಸುವ ಪ್ರಮುಖ ಹಬ್ಬವಾಗಿದೆ. ಪ್ರಕೃತಿಯ ಪುನರುಜ್ಜೀವನ, ವಸಂತ ಋತುವಿನ ಆಗಮನವನ್ನು ಸಾರುವ ಈ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಗುತ್ತದೆ. ಮನೆ ಶುದ್ಧೀಕರಣ, ಮಾವಿನ ತೋರಣ, ಅಭ್ಯಂಗ ಸ್ನಾನ, ಪಂಚಾಂಗ ಪೂಜೆ ಹಾಗೂ ಬೇವು-ಬೆಲ್ಲ ಸೇವನೆಯ ಮೂಲಕ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸುವ ಸಂದೇಶವನ್ನು ನೀಡುತ್ತದೆ.

ಬೆಂಗಳೂರು, ಮಾ.18: ಭಾರತೀಯ ಸಂಸ್ಕೃತಿಯ ಮಹತ್ವಪೂರ್ಣ ಹಬ್ಬಗಳಲ್ಲಿ ಒಂದಾದ ಯುಗಾದಿ, ಹೊಸ ವರ್ಷದ ಪ್ರಾರಂಭವನ್ನು ಸೂಚಿಸುತ್ತದೆ. ಯುಗಸ್ಯ ಆದಿ ಅಂದರೆ ಯುಗದ ಪ್ರಾರಂಭ ಎಂಬ ಅರ್ಥವನ್ನು ಹೊಂದಿರುವ ಈ ಹಬ್ಬವನ್ನು ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಡಗರದಿಂದ ಆಚರಿಸಲಾಗುತ್ತದೆ. ಪ್ರಕೃತಿಯಲ್ಲಿ ಹೊಸತನ ಮೂಡಿಬರುವ, ಗಿಡಮರಗಳು ಚಿಗುರಿ ಹೂ ಬಿಡುವ, ಕೋಗಿಲೆ ಇಂಪಾಗಿ ಹಾಡುವ ವಸಂತ ಋತುವಿನ ಆಗಮನವೇ ಯುಗಾದಿಯ ಮೂಲ. ಬ್ರಹ್ಮದೇವನು ಸೃಷ್ಟಿಯನ್ನು ಪ್ರಾರಂಭಿಸಿದ ದಿನವೆಂಬ ನಂಬಿಕೆಯೂ ಇದೆ. ಈ ದಿನ ಮನೆಯನ್ನು ಶುದ್ಧಗೊಳಿಸಿ ಮಾವಿನ ತೋರಣ ಕಟ್ಟಲಾಗುತ್ತದೆ. ಅಭ್ಯಂಗ ಸ್ನಾನ, ಹೊಸ ವಸ್ತ್ರ ಧಾರಣೆ, ಕುಲದೇವರ ಪೂಜೆಗಳು ಸಾಂಪ್ರದಾಯಿಕ ಆಚರಣೆಗಳಾಗಿವೆ. ಪಂಚಾಂಗ ಪೂಜೆ ಮಾಡುವುದರಿಂದ ವರ್ಷಪೂರ್ತಿ ಶುಭ ಫಲಗಳು ದೊರೆಯುವುದೆಂಬ ನಂಬಿಕೆಯಿದೆ. ಯುಗಾದಿಯ ವಿಶೇಷ ಖಾದ್ಯ ಬೇವು-ಬೆಲ್ಲ. ಇದು ಜೀವನದ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸುವ ಸಂಕೇತವಾಗಿದೆ. ಈ ಹಬ್ಬ ಆರೋಗ್ಯ, ಅದೃಷ್ಟ ಮತ್ತು ಮಾನಸಿಕ ನೆಮ್ಮದಿಗೆ ಪ್ರೇರಕವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More