ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು

Updated on: Jan 20, 2025 | 8:08 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಂಜು ಹಾಗೂ ರಜತ್ ಮಧ್ಯೆ ಕಿತ್ತಾಟ ಜೋರಾಗಿತ್ತು. ಇವರ ಮಧ್ಯೆ ಈಗಲೂ ಕಿತ್ತಾಟ ನಡೆಯುತ್ತಲೇ ಇದೆ. ಈ ಮಧ್ಯೆ ರಜತ್ ಮೇಲಿನ ಕೋಪಕ್ಕೆ ಮಂಜು ಅವರು ಟೇಬಲ್ ಪುಡಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಫಿನಾಲೆ ಸಮೀಪಿಸಿದೆ. ಈ ವೇಳೆ ಒಂದು ಚಟುವಟಿಕೆ ನೀಡಲಾಗಿದೆ. ಈ ಚಟುವಟಿಕೆ ವೇಳೆ ಮಂಜು ಅವರು ರಜತ್ ಮೇಲೆ ಕೋಪ ತೀರಿಸಿಕೊಂಡಿದ್ದಾರೆ. ರಜತ್ ಫೋಟೋ ಹಾಕಿದ್ದ ಮಡಿಕೆ ಒಡೆದ ಅವರು ಟೇಬಲ್​ನೂ ಪೀಸ್​ ಪೀಸ್ ಮಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More