Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್

ಬೆಂಗಳೂರಿನಲ್ಲಿ ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್

ರಮೇಶ್ ಬಿ. ಜವಳಗೇರಾ
|

Updated on: Nov 05, 2024 | 10:27 PM

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಬೆಂಗಳೂರಿನ ಜಯನಗರದಲ್ಲಿರುವ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದುಕೊಂಡರು.

ಬೆಂಗಳೂರು, (ನವೆಂಬರ್ 05): ಬ್ರಿಟನ್ ನ ಮಾಜಿ ಪ್ರಧಾನಿ ರಿಷಿ ಸುನಾಕ್ ಹಾಗೂ ಅವರ ಪತ್ನಿ ಅಕ್ಷತಾ ಮೂರ್ತಿಯವರು ಬೆಂಗಳೂರಿನ ಜಯನಗರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಈ ಸಂದರ್ಭದಲ್ಲಿ, ಇನ್ಫೋಸಿಸ್ ಸಹ ಸಂಸ್ಥಾಪಕರಾದ ನಾರಾಯಣ ಮೂರ್ತಿ, ಅವರ ಪತ್ನಿ ಸುಧಾಮೂರ್ತಿ ಸಹ ಹಾಜರಿದ್ದರು. ಇಂದು(ನವೆಂಬರ್ -5_ ಸಂಜೆ 6 ಗಂಟೆ ಸುಮಾರಿಗೆ ಮಠಕ್ಕೆ ಆಗಮಿಸಿದ ರಿಷಿ ಸುನಾಕ್ ದಂಪತಿ ಹಾಗೂ ನಾರಾಯಣ ಮೂರ್ತಿ ದಂಪತಿಯು ಸುಮಾರು ಅರ್ಧ ಗಂಟೆಗಳ ಕಾಲ ಮಠದಲ್ಲಿದ್ದರು. ಮೊದಲಿಗೆ ವಿಶೇಷ ಪೂಜೆ ನೆರವೇರಿಸಿದ ಅವರು, ಮಂಗಳಾರತಿ, ತೀರ್ಥ, ರಾಯರ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಇದೇ ವೇಳೆ ಕಾರ್ತಿಕ ಮಾಸದ ಪ್ರಯುಕ್ತ ರಾಯರ ಸನ್ನಿಧಿಯಲ್ಲಿ ದೀಪಗಳನ್ನು ಬೆಳಗಿದರು.