‘ಸಿನಿಮಾ ಆಗುವ ತನಕ ನಿರ್ಮಾಪಕ, ಆಮೇಲೆ ತಗಡು’; ದರ್ಶನ್​ಗೆ ಉಮಾಪತಿ ತಿರುಗೇಟು

Updated on: Feb 21, 2024 | 10:11 AM

‘ನಾನು ಎಲ್ಲಿಯೂ ನಾಲಿಗೆ ಹರಿಬಿಟ್ಟಿಲ್ಲ. ಯಾರು ಯಾರಿಗೂ ವಾರ್ನಿಂಗ್​ ಕೊಡೋಕೆ ಆಗಲ್ಲ. ವಾರ್ನಿಂಗ್​ ಕೊಡೋದು ಮೇಲೆ ಇರುವ ಭಗವಂತ ಮತ್ತು ನಮ್ಮ ಮನೆಯಲ್ಲಿ ಇರುವ ತಂದೆ-ತಾಯಿ ಮಾತ್ರ. ಇಂಥ ವಾರ್ನಿಂಗ್​ಗಳಿಗೆ ನಾನು ಕೇರ್​ ಮಾಡುವ ವ್ಯಕ್ತಿ ಅಲ್ಲ. ಬೇಕಾದಷ್ಟು ವಾರ್ನಿಂಗ್​ಗಳನ್ನು ನಾನು ಕಸದ ಬುಟ್ಟಿಗೆ ಎಸೆದಿದ್ದೇನೆ. ಎಲ್ಲವನ್ನೂ ದೇವರ ನೋಡಿಕೊಳ್ಳುತ್ತಾನೆ’ ಎಂದು ಉಮಾಪತಿ ಶ್ರೀನಿವಾಸ್​ ಗೌಡ ಹೇಳಿದ್ದಾರೆ.

ನಿರ್ಮಾಪಕ ಉಮಾಪತಿ ಮತ್ತು ನಟ ದರ್ಶನ್​ (Darshan) ನಡುವಿನ ಕಿರಿಕ್​ ಈಗ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಇಬ್ಬರೂ ಕೂಡ ನೇರವಾಗಿ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ‘ಕಾಟೇರ’ (Kaatera) ಹಾಗೂ ‘ರಾಬರ್ಟ್​’ ಸಿನಿಮಾಗಳ ಕಥೆ-ಟೈಟಲ್​ ವಿಚಾರಕ್ಕೆ ಸಂಬಂಧಿಸಿದಂತೆ ಒಂದಷ್ಟು ಗೊಂದಲಗಳು ಮೂಡಿವೆ. ಈ ಕುರಿತು ‘ಕಾಟೇರ’ ಸಿನಿಮಾದ 50ನೇ ದಿನದ ಸುದ್ದಿಗೋಷ್ಠಿಯಲ್ಲಿ ದರ್ಶನ್​ ಅವರು ಸ್ಪಷ್ಟನೆ ನೀಡಿದರು. ಈ ವೇಳೆ ‘ತಗಡು’ ಎಂಬ ಪದ ಬಳಕೆ ಮಾಡಿದರು. ಅದಕ್ಕೆ ‘ರಾಬರ್ಟ್​’ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಯಾರು ಯಾರಿಗೆ ಗುಮ್ಮುತ್ತಾರೆ? ಇವರೆಲ್ಲ ಕಾನೂನಿಗಿಂತ ದೊಡ್ಡವರಾ? ವೇದಿಕೆ ಸಿಕ್ಕಿದೆ ಅಂತ ಹೇಗೆ ಬೇಕೋ ಹಾಗೆ ಮಾತನಾಡಬಾರದು. ಸಿನಿಮಾ ಆಗುವವರೆಗೆ ನಿರ್ಮಾಪಕರು. ಸಿನಿಮಾ ಆದಮೇಲೆ ತಡಗು. ಇದೇ ತಗಡು ತಾನೇ ರಾಬರ್ಟ್​ ಸಿನಿಮಾ ಮಾಡಿದ್ದು? ಅವರು ಸಿನಿಮಾದ ಮುಖ. ಆದರೆ ಬಂಡವಾಳ ಹೂಡಿದ್ದು ನಾನು. ಮನಸಾಕ್ಷಿಗೆ ಯಾರೂ ಸುಳ್ಳು ಹೇಳೋಕೆ ಆಗಲ್ಲ’ ಎಂದು ಉಮಾಪತಿ ಶ್ರೀನಿವಾಸ್​ ಗೌಡ (Umapathy Srinivas Gowda) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More