ನಿರ್ಮಾಪಕ-ನಿರ್ದೇಶಕ ಇದ್ರೆ ಮಾತ್ರ ಸ್ಟಾರ್ ಹುಟ್ಟುತ್ತಾನೆ; ಉಮಾಪತಿ ಶ್ರೀನಿವಾಸ್

Edited By:

Updated on: Nov 04, 2025 | 10:59 AM

ಉಮಾಪತಿ ಶ್ರೀನಿವಾಸ್ ಅವರಿಗೆ ಒಂದಲ್ಲ ಎರಡಲ್ಲ ಸಿನಿಮಾಗೆ ಅವಾರ್ಡ್ ಬಂದಿದೆ. ಈ ಅವಾರ್ಡ್​ನ ಅವರು ಸ್ವೀಕರಿಸಿ ಗಮನ ಸೆಳೆದರು. ಈಗ ಅವರು ಸಿನಿಮಾ ಬಗ್ಗೆ ಮಾತನಾಡಿದರು. ಈ ವೇಳೆ ಹಲವು ವಿಚಾರಗಳನ್ನು ಹಂಚಿಕೊಂಡರು. ಅವರು ದರ್ಶನ್​ಗೆ ಟಾಂಗ್ ಕೊಟ್ಟರು ಎಂದು ಹೇಳಲಾಗುತ್ತಾ ಇದೆ.

ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು ಮತ್ತು ಈ ಬಾಂಧವ್ಯ ಈಗ ದೂರವಾಗಿದೆ. ಹೀಗಾಗಿ, ಆಗಾಗ ಒಬ್ಬರಿಗೊಬ್ಬರು ಟಾಂಗ್ ಕೊಟ್ಟುಕೊಳ್ಳುತ್ತಲೇ ಇದ್ದರು. ಈಗ ಉಮಾಪತಿ ಶ್ರೀನಿವಾಸ್ ಅವರು ಒಂದು ವಿಷಯ ಹೇಳಿದ್ದಾರೆ. ‘ನಿರ್ಮಾಪಕರು ಇದ್ರೆ ಒಂದು ಸಿನಿಮಾ ಮಾತ್ರ ಆಗುತ್ತದೆ ಎಂದು ಒಬ್ಬರು ಹೇಳಿದ್ದರು. ನಿರ್ಮಾಪಕರು ಹಾಗೂ ನಿರ್ದೇಶಕರು ಇದ್ದರೆ ಮಾತ್ರ ಸ್ಟಾರ್ ಹುಟ್ಟೋದು’ ಎಂದು ಉಮಾಪತಿ ಹೇಳಿದ್ದಾರೆ. ಇದು ದರ್ಶನ್​ಗೆ ಹೇಳಿದ ಮಾತು ಎಂದು ಅನೇಕರು ಊಹಿಸುತ್ತಿದ್ದಾರೆ. ದರ್ಶನ್​ಗೆ ಒಳ್ಳೆಯದಾಗಲಿ ಎಂದು ಉಮಾಪತಿ ಹಾರೈಸಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More