Mahakumbh 2025: ದಟ್ಟಣೆಯಲ್ಲಿ ರೈಲು ಹತ್ತಲು ಸಾಧ್ಯವಾಗದಿದ್ದಕ್ಕೆ ರೈಲು ಧ್ವಂಸಗೊಳಿಸಿದ ಜನ

Updated on: Feb 11, 2025 | 10:57 AM

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ದೇಶದ ವಿವಿಧ ಮೂಲೆಗಳಿಂದ ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಹೋಗುತ್ತಿದ್ದಾರೆ. ಪ್ರಯಾಗ್​ರಾಜ್​ಗೆ ಹೋಗಲು ಭಕ್ತರು ಬಿಹಾರದ ಮಧುಬನಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು, ದಟ್ಟಣೆಯಿಮದಾಗಿ ರೈಲು ಹತ್ತಲು ಸಾಧ್ಯವಾಗದಿದ್ದಿದ್ದಕ್ಕೆ ಜನರು ಎಸಿ ಬೋಗಿಗಳನ್ನು ಧ್ವಂಸಗೊಳಿಸಿರುವ ಘಟನೆ ವರದಿಯಾಗಿದೆ. ವಿಡಿಯೋದಲ್ಲಿ ಪ್ರಯಾಣಿಕರು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ, ಕಿಟಕಿಗಳನ್ನು ಒಡೆದು, ಬಲವಂತವಾಗಿ ಬೋಗಿಗಳಿಗೆ ಪ್ರವೇಶಿಸುವುದನ್ನು ಕಾಣಬಹುದು.

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ದೇಶದ ವಿವಿಧ ಮೂಲೆಗಳಿಂದ ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಹೋಗುತ್ತಿದ್ದಾರೆ. ಪ್ರಯಾಗ್​ರಾಜ್​ಗೆ ಹೋಗಲು ಭಕ್ತರು ಬಿಹಾರದ ಮಧುಬನಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು, ದಟ್ಟಣೆಯಿಮದಾಗಿ ರೈಲು ಹತ್ತಲು ಸಾಧ್ಯವಾಗದಿದ್ದಿದ್ದಕ್ಕೆ ಜನರು ಎಸಿ ಬೋಗಿಗಳನ್ನು ಧ್ವಂಸಗೊಳಿಸಿರುವ ಘಟನೆ ವರದಿಯಾಗಿದೆ.

ವಿಡಿಯೋದಲ್ಲಿ ಪ್ರಯಾಣಿಕರು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ, ಕಿಟಕಿಗಳನ್ನು ಒಡೆದು, ಬಲವಂತವಾಗಿ ಬೋಗಿಗಳಿಗೆ ಪ್ರವೇಶಿಸುವುದನ್ನು ಕಾಣಬಹುದು. ಎಸಿ ಬೋಗಿಗಳು ಭಕ್ತರಿಂದ ತುಂಬಿ ತುಳುಕುತ್ತಿದ್ದವು, ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗುತ್ತಿದ್ದಂತೆ, ಕೆಲವು ಪ್ರಯಾಣಿಕರು ಕಿಟಕಿಗಳ ಮೂಲಕ ಹತ್ತಲು ಪ್ರಯತ್ನಿಸಿದರು, ಆದರೆ ಇತರರು ಕೋಪದಿಂದ ಕಲ್ಲುಗಳನ್ನು ಎಸೆದು ಗಾಜು ಒಡೆದರು. ಮಧುಬನಿ ಮತ್ತು ದರ್ಭಂಗಾ ನಡುವಿನ ಪ್ರದೇಶಗಳಲ್ಲಿ ರೈಲು ಇದೇ ರೀತಿಯ ಅವ್ಯವಸ್ಥೆಯನ್ನು ಎದುರಿಸಿತು. ಮಿಥಿಲಾಂಚಲ್ ಪ್ರದೇಶದ ಸಾವಿರಾರು ಜನರು ಮಾಘ ಪೂರ್ಣಿಮೆಗೆ ಪ್ರಯಾಗರಾಜ್‌ಗೆ ಧಾವಿಸುತ್ತಿರುವುದರಿಂದ ಜನದಟ್ಟಣೆ ಹೆಚ್ಚಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More