ಅನರ್ಹರೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ, ಇದು ನಿಲ್ಲಬೇಕು: ಸತೀಶ್ ಜಾರಕಿಹೊಳಿ

Updated on: Aug 14, 2024 | 3:21 PM

ಯಾವುದೇ ಯೋಜನೆ ಜಾರಿ ಮಾಡಿದರೂ ಅದು ಫೂಲ್​ಪ್ರೂಫ್ ಅಗಿರಲ್ಲ, ಆಗಾಗ ತಿದ್ದುಪಾಟುಗಳನ್ನು ಮಾಡಬೇಕಾಗುತ್ತದೆ, ಈ ಮಾತು ಎಲ್ಲ ಸರ್ಕಾರಗಳಿಗೆ ಅನ್ವಯಿಸುತ್ತದೆ, ಜನಪರ ಯೋಜನೆಗಳನ್ನು ರೂಪಿಸುವಾಗ ಒಂದಷ್ಟು ಅಂಶಗಳು ಗಣನೆಗೆ ಬಾರದೆ ಹೋಗಿರುತ್ತವೆ, ಅವುಗಳನ್ನು ನಂತರ ಸೇರಿಸಬೇಕಾಗುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಬೆಂಗಳೂರು: ನಗರದ ತಮ್ಮ ಕಚೇರಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂದು ತಾನ್ಯಾವತ್ತು ಹೇಳಿಲ್ಲ ಆದರೆ ಅನೇಕ ಅನರ್ಹರು ಯೋಜನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ, ಅದನ್ನು ನಿಲ್ಲಿಸಿ ಕೇವಲ ಬಡವರಿಗೆ ಮಾತ್ರ ಯೋಜನೆಗಳ ಫಲ ದಕ್ಕುವಂತಾಗಬೇಕೆಂದು ಸರ್ಕಾರಕ್ಕೆ ತಿಳಿಸಿದ್ದೇನೆ ಎಂದರು. ಅಮೇರಿಕದಲ್ಲಿ ವೈದ್ಯ ಮತ್ತು ಇಂಜಿನೀಯರ್ ಗಳಾಗಿ ಕೆಲಸ ಮಾಡುವವರ ಕುಟುಂಬಗಳ ಸದಸ್ಯರು ಸಹ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿ ಬಡವರ ಪಾಲು ಮತ್ತು ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ, ಇದನ್ನು ನಿಲ್ಲಿಸಿ ಕೇವಲ ಬಡವರಿಗೆ ಮಾತ್ರ ಯೋಜನೆಗಳ ಲಾಭ ಸಿಗುವಂತಾಗಬೇಕು ಎಂದು ಜಾರಕಿಹೊಳಿ ಹೇಳಿದರು. ಇದನ್ನು ಮಾಡೋದು ಹೇಗೆ? ಸರ್ಕಾರಕ್ಕೆ ಯಾವುದಾದರೂ ಸಲಹೆ ನೀಡಿದ್ದೀರಾ ಅಂತ ಕೇಳಿದರೆ ಸರ್ಕಾರವೇ ಚಿಂತನೆ ನಡೆಸಬೇಕು ಎಂದು ಸಚಿವ ಹೇಳಿದರು. ಬಸ್ ನಲ್ಲಿ ಪ್ರಯಾಣಿಸುವಾಗ ಟಿಕೆಟ್ ಖರೀದಿಸುವ ಶಕ್ತಿಯುಳ್ಳವರು ಸಹ ಆಧಾರ್ ಕಾರ್ಡ್ ತೋರಿಸಿ ಪುಕ್ಕಟ್ಟೆ ಪ್ರಯಾಣ ಮಾಡುತ್ತಾರೆ, ಹಾಗೆಯೇ ಸ್ಥಿತಿವಂತರು ಸಹ ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗ್ತಿಲ್ಲ: ಹೈಕಮಾಂಡ್ ಮುಂದೆ ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಸಚಿವರ ಡಿಮ್ಯಾಂಡ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More