Karnataka Assembly Polls; ಲಕ್ಷ್ಮಣ್ ಸವದಿ ಕಾಂಗ್ರೆಸ್ ಪಕ್ಷ ಸೇರಿದರೆ ನಮ್ಮ ಬಲ ಹೆಚ್ಚುವುದರಲ್ಲಿ ಸಂಶಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

|

Updated on: Apr 14, 2023 | 12:11 PM

ಆಪರೇಷನ್ ಕಮಲ ನಡೆಸಿದರಿಗೆ ತಿರುಗುಬಾಣವಾಗುತ್ತಿದೆ ಎಂದು ಮಾಧ್ಯಮದವರು ಹೇಳಿದಾಗ, ಕಾಲಾಯ ತಸ್ಮೈ ನಮಃ ಎಂದು ಹೆಬ್ಬಾಳ್ಕರ್ ಮಾರ್ಮಿಕವಾಗಿ ಹೇಳುತ್ತಾರೆ.

ಬೆಳಗಾವಿ: ಲಕ್ಷ್ಮಣ ಸವದಿಯವರು (Laxman Savadi) ಕಾಂಗ್ರೆಸ್ ಪಕ್ಷ ಸೇರಿದರೆ ಬಲ ಹೆಚ್ಚುವುದರಲ್ಲಿ ಸಂಶಯವಿಲ್ಲ ಆದರೆ ಅವರ ಸೇರ್ಪಡೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪಕ್ಷದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸವದಿ ಬಿಜೆಪಿಯಿಂದ ಹೊರಬಿದ್ದು ಕಾಂಗ್ರೆಸ್ ಸೇರುವ ಪ್ರಕ್ರಿಯೆ (process) ಜಾರಿಯಲ್ಲಿದೆ, ತಾನು ಇದಕ್ಕಿಂತ ಜಾಸ್ತಿ ಕಾಮೆಂಟ್ ಮಾಡಲಾರೆ ಎಂದು ಹೇಳುತ್ತಾರೆ. ಆಪರೇಷನ್ ಕಮಲ ನಡೆಸಿದರಿಗೆ ತಿರುಗುಬಾಣವಾಗುತ್ತಿದೆ ಎಂದು ಮಾಧ್ಯಮದವರು ಹೇಳಿದಾಗ, ಕಾಲಾಯ ತಸ್ಮೈ ನಮಃ ಎಂದು ಹೆಬ್ಬಾಳ್ಕರ್ ಮಾರ್ಮಿಕವಾಗಿ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on