ದೆಹಲಿ: ರಾಜ್ಯಸಭೆ ಮತ್ತು ಲೋಕಸಭೆಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದರು. ಅಧಿವೇಶನದಲ್ಲಿ ಭಾಗಿಯಾಗುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ನಾಡಪ್ರಭು ಕೆಂಪೇಗೌಡರ 515 ಜಯಂತಿ ಪ್ರಯುಕ್ತ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿಯೇ ತಾನು, ರಾಜ್ಯದ ಮತ್ತೊಬ್ಬ ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಕೋಲಾರದ ಜೆಡಿಎಸ್ ಸಂಸದ ಮಲ್ಲೇಶ್ ಅವರೊಂದಿಗೆ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾಗಿ ಹೇಳಿದರು. ಕರ್ನಾಟಕ ಸರ್ಕಾರವು ಕೆಂಪೇಗೌಡ ಜಯಂತಿ ಅಧಿಕೃತ ಕಾರ್ಯಕ್ರಮದ ಪ್ರಕಟಣೆಯಲ್ಲಿ ತನ್ನ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹೆಸರು ಸೇರಿಸದಿರುವುದು ದೊಡ್ಡ ವಿಷಯವೆನಲ್ಲ ಮತ್ತು ತಾನು ಅದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ದೆಹಲಿಯಲ್ಲಿ ಕುಮಾರಸ್ವಾಮಿ ಬುಧವಾರ ಹೇಳಿದ್ದರು. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿರುವ ಸಭೆಗೆ ಹಾಜರಾಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಕುಮಾರಸ್ವಾಮಿ; ಏನೋ ಸಭೆ ಕರೆದಿದ್ದಾರೆ ನೋಡೋಣ ಅಂತ ಉಡಾಫೆಯ ಉತ್ತರ ನೀಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ