ಊಟಕ್ಕಾಗಿ ಬ್ರೇಕ್ ತೆಗೆದುಕೊಳ್ಳದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಹೆಚ್ ಡಿ ಕುಮಾರಸ್ವಾಮಿ

ಇದೇ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗವಹಿಸಿದಂತೆ ಸಿದ್ದರಾಮಯ್ಯ ಸರ್ಕಾರ ತನ್ನ ಅಧಿಕಾರಿಗಳನ್ನು ತಡೆದಿದೆ ಎಂದು ಕುಮಾರಸ್ವಾಮಿ ಇಂದು ಬೆಳಗ್ಗೆ ಮಾಧ್ಯಮದವರ ಮುಂದೆ ಹೇಳಿದ್ದರು. ಅಧಿಕಾರಿಗಳ ಗೈರುಹಾಜರಿ ಎದ್ದು ಕಾಣಿತಿತ್ತು. ಅವರು ಉಪಸ್ಥಿತರಿದ್ದರೆ ಕುಮಾರಸ್ವಾಮಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಬಹುದಿತ್ತು.

ಊಟಕ್ಕಾಗಿ ಬ್ರೇಕ್ ತೆಗೆದುಕೊಳ್ಳದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಹೆಚ್ ಡಿ ಕುಮಾರಸ್ವಾಮಿ
|

Updated on: Jul 05, 2024 | 7:04 PM

ಮಂಡ್ಯ: ಅಧಿಕಾರಿಗಳ ಗೈರು ಹಾಜರಿಯಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಗರದ ಅಂಬೇಡ್ಕರ್ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿ ಜನರ ದೂರ ದುಮ್ಮಾನಗಳನ್ನು ಆಲಿಸಿದರು. ಜನ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರಿಂದ ಕುಮಾರಸ್ವಾಮಿಯವರಿಗೆ ಲಂಚ್ ಗಾಗಿ ಬ್ರೇಕ್ ತೆಗೆದುಕೊಳ್ಳುವುದು ಸಹ ಸಾಧ್ಯವಾಗಲಿಲ್ಲ ಜನರ ಸಮಸ್ಯೆಗಳನ್ನು ಆಲಿಸುತ್ತಾ ಅವರು ಊಟ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಸಚಿವ ಊಟ ಮಾಡುತ್ತಿದ್ದಾರೆ ಅವರಿಗೆ ತೊಂದರೆ ಕೊಡೋದು ಬೇಡ ಅಂತ ಜನ ಅವರ ಬಳಿ ಹೋಗಲು ಹಿಂಜರಿಯುತ್ತಿದ್ದಾಗ ಕುಮಾರಸ್ವಾಮಿಯವರೇ ಅವರನ್ನು ಕೈಯಿಂದ ಸನ್ನೆ ಮಾಡಿ ಬನ್ನಿ ಅಂತ ಕರೆದರು. ಇವತ್ತಿನ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವನೊಂದಿಗೆ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಡಿಸಿ ತಮ್ಮಣ್ಣ, ಮಾಜಿ ಶಾಸಕ ಶ್ರೀಕಂಠಯ್ಯ, ಅನ್ನದಾನಿ, ಸುರೇಶ್ ಗೌಡ ಮೊದಲಾದವರು ಇದ್ದರು. ಕುಮಾರಸ್ವಾಮಿ ಜನರ ಸಮಸ್ಯೆಗಳನ್ನು ಆಲಿಸುವ ಜೊತೆಗೆ ಮನವಿ ಪತ್ರಗಳನ್ನೂ ಸ್ವೀಕರಿಸಿದರು. ಶಾಲೆಯೊಂದರ ಮಕ್ಕಳು ಸಹ ತಮ್ಮ ದೂರನ್ನು ಅವರಲ್ಲಿ ಹೇಳಿಕೊಂಡಿದ್ದು ವಿಶೇಷವೆನಿಸಿತು..

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಧಿಕಾರಿಗಳು ಶಿಷ್ಟಾಚಾರವನ್ನಷ್ಟೇ ಪಾಲಿಸುತ್ತಾರೆ, ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅವರೊಂದಿಗೆ ಹೋಗುತ್ತಾರೆ: ಶಿವಕುಮಾರ್

Follow us
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’