AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯ ಕೋರಿ ಮನೆಯ ಬಳಿ ಬಂದ ಮಹಿಳೆಗೆ ನೆರವಾದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಸಹಾಯ ಕೋರಿ ಮನೆಯ ಬಳಿ ಬಂದ ಮಹಿಳೆಗೆ ನೆರವಾದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 12, 2024 | 1:55 PM

Share

ಆಯುಧ ಪೂಜೆ ಮತ್ತು ವಿಜಯದಶಮಿ ನಿಮಿತ್ತ ಸಚಿವ ಕುಮಾರಸ್ವಾಮಿ ಬೆಂಗಳೂರಿಗೆ ಆಗಮಿಸಿರಬಹುದು ಅದರೆ ಸೋಜಿಗದ ಸಂಗತಿಯೆಂದರೆ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರೂ ಹೆಚ್ಚಿನ ಸಮಯವನ್ನು ಕರ್ನಾಟಕದಲ್ಲಿ ಕಳೆಯುತ್ತಾರೆ. ಕಾಂಗ್ರೆಸ್ ನಾಯಕರು ಹಲವಾರು ಬಾರಿ ಈ ಕುರಿತು ತಕರಾರು ಎತ್ತಿದ್ದಾರೆ.

ಬೆಂಗಳೂರು: ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಸಂಸತ್ತ್ತಿಗೆ ಅಯ್ಕೆಯಾಗಿ ಕೇಂದ್ರದಲ್ಲಿ ಮಂತ್ರಿಯಾದರೂ ರಾಜ್ಯದಲ್ಲಿ ಮೊದಲಿನಷ್ಟೇ ಜನಪ್ರಿಯ ನಾಯಕ. ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾ ಸಹಾಯ ಕೋರಿ ಈಗಲೂ ಜನ ಅವರಲ್ಲಿಗೆ ಬರುತ್ತಾರೆ. ಇಲ್ಲೊಬ್ಬ ಮಹಿಳೆ ತಾವು ಅನುಭವಿಸುತ್ತಿರುವ ತೊಂದರೆಯನ್ನು ಹೇಳಿಕೊಳ್ಳಲು ಹೋದಾಗ ಕುಮಾರಸ್ವಾಮಿ ಮೊದಲಿಗೆ ಅಸಹಾಯಕತೆ ಪ್ರದರ್ಶಿಸಿದರೂ ನಂತರ ತಮ್ಮ ಆಪ್ತ ಕಾರ್ಯದರ್ಶಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚನೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ್​

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More