ಬೆಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್, ವಿಜಯೇಂದ್ರ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬಜೆಟ್ ಬಳಿಕ ಬೆಂಗಳೂರಿಗೆ ಆಗಮನಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕೇಂದ್ರ ಬಜೆಟ್ ಬಗ್ಗೆ ಮಾಹತಿ ಹಂಚಿಕೊಂಡಿದ್ದಾರೆ. ಹಾಗಾದ್ರೆ, ಏನೆಲ್ಲಾ ಹೇಳುತ್ತಿದ್ದಾರೆ ಎನ್ನುವುದನ್ನು ನೇರಪ್ರಸಾರದಲ್ಲಿ ನೋಡಿ
ಬೆಂಗಳೂರು, ಜುಲೈ 28): ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಇನ್ನು ಬಜೆಟ್ನಲ್ಲಿ ಕರ್ನಾಟಕ್ಕೆ ಏನು ಕೊಟ್ಟಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಮೋಸ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರ ಆರೋಪಿಸಿದ್ದಾರೆ. ಇನ್ನು ಬಜೆಟ್ ಬಳಿಕ ಬೆಂಗಳೂರಿಗೆ ಆಗಮನಿಸಿರುವ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕೇಂದ್ರ ಬಜೆಟ್ ಬಗ್ಗೆ ಮಾಹತಿ ಹಂಚಿಕೊಂಡಿದ್ದಾರೆ.