ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆಯೇ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ತಾಯಿಗೆ ಪೂಜೆ ಸಲ್ಲಿಸಿದರು. ತಮ್ಮ ಪರವಾಗಿ ಅರ್ಚಕರು ಪೂಜೆ ಸಲ್ಲಿಸುವಾಗ ಕುಮಾರಸ್ವಾಮಿ ದೇವಿಯ ಮುಂದೆ ಕೈಕಟ್ಟಿಕೊಂಡು ವಿನೀತರಾಗಿ ನಿಂತಿದ್ದರು. ಜೆಡಿಎಸ್ ಶಾಸಕ ಹರೀಶ್ ಗೌಡ ಮತ್ತು ಪಕ್ಷದ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಸಚಿವರ ಜೊತೆಗಿರುವುದನ್ನು ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Mysuru Dasara Mahotsav-2024: ಜಂಬೂ ಸವಾರಿಗೆ 3-ದಿನ ಬಾಕಿ, ಪುಷ್ಪಾರ್ಚನೆ ರಿಹರ್ಸಲ್ನಲ್ಲಿ ಆನೆಗಳು ಭಾಗಿ