AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿವೇಕ ಬಿರಾದಾರ
|

Updated on: Apr 20, 2025 | 7:18 PM

ಹುಬ್ಬಳ್ಳಿಯಲ್ಲಿ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನೆರವಾಗಿದ್ದಾರೆ. ಅವರು ತಮ್ಮ ಪೊಲೀಸ್ ಬೆಂಗಾವಲು ವಾಹನದಲ್ಲಿ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಆಸ್ಪತ್ರೆ ನಿರ್ದೇಶಕರಿಗೆ ಕರೆ ತುರ್ತು ಚಿಕಿತ್ಸೆಗೆ ಸೂಚಿಸಿದರು. ಈ ಘಟನೆಯಿಂದ ಸಚಿವರ ಮಾನವೀಯತೆ ಎದ್ದು ಕಾಣುತ್ತದೆ.

ಹುಬ್ಬಳ್ಳಿ, ಏಪ್ರಿಲ್​ 20: ಅಪಘಾತದಲ್ಲಿ ಗಾಯಗೊಂಡವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೆರವಾಗಿದ್ದಾರೆ. ಹುಬ್ಬಳ್ಳಿ ನಗರದ ಶಿರೂರ ಪಾರ್ಕ್, ಟೆಂಡರ್ ಶ್ಯೂರ್ ರಸ್ತೆ ಮಾರ್ಗದಲ್ಲಿ ಎರಡು ದ್ವಿಚಕ್ರ ವಾಹನಗಳ ಮದ್ಯೆ ಅಪಘಾತ ಸಂಭವಿಸಿತ್ತು. ಇದೇ ಮಾರ್ಗದಲ್ಲಿ ಹೋಗುತ್ತಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕೂಡಲೇ ತಮ್ಮ ವಾಹನ ನಿಲ್ಲಿಸಿ ನೆರವಿಗೆ ದಾವಿಸಿದರು. ತೀವ್ರ ತಲೆಗೆ ಪೆಟ್ಟಾದ ವ್ಯಕ್ತಿಗೆ ತಮ್ಮ ಪೊಲೀಸ್ ಬೆಂಗಾವಲು ವಾಹನದಲ್ಲಿ ಕಿಮ್ಸ್​ ಆಸ್ಪತ್ರೆಗೆ ರವಾನೆ ಮಾಡಿದರು. ಬಳಿಕ, ಕಿಮ್ಸ್ ನಿರ್ದೇಶಕ ಕಮ್ಮಾರ ಅವರಿಗೆ ಕರೆ ಮಾಡಿ ತುರ್ತು ಚಿಕಿತ್ಸೆ ನೀಡುವಂತೆ ಅವರಿಗೆ ಸೂಚಿಸಿದರು.