ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಏನಂದ್ರು ನೋಡಿ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಜನಪ್ರತಿನಿಧಿಗಳು ಆದರ್ಶವಾಗಿರಬೇಕು ಎಂದು ಹೇಳಿದ ಜೋಶಿ, ಸಂಪೂರ್ಣ ಮಾಹಿತಿ ಇಲ್ಲ ಎಂದು ತಿಳಿಸಿದರು. ಲಂಚದ ಮೊತ್ತದ ಬಗ್ಗೆ ಭಿನ್ನ ವರದಿಗಳಿರುವ ಕಾರಣ ಸತ್ಯಾಂಶಗಳನ್ನು ಕಲೆಹಾಕಿದ ನಂತರ ಮಾತನಾಡುವುದಾಗಿ ಅವರು ತಿಳಿಸಿದ್ದಾರೆ.
ಧಾರವಾಡ, ಫೆಬ್ರವರಿ 21: ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ, ಮಾಹಿತಿ ಪಡೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಜನಪ್ರತಿನಿಧಿಗಳಾದವರು ಬಹಳ ಜಾಗರೂಕರಾಗಿರಬೇಕು ಮತ್ತು ಜನರ ಕೆಲಸ ಮಾಡಲು ಬಂದಿರುತ್ತಾರೆ. ಸಾರ್ವಜನಿಕ ಬದುಕಿನಲ್ಲಿ ಜನರಿಗೆ ಆದರ್ಶವಾಗಿರಬೇಕು. ಪ್ರಾಥಮಿಕ ವರದಿಗಳನ್ನು ಗಮನಿಸಿದಾಗ ಈ ವಿಷಯ ಮನಸ್ಸಿಗೆ ಕಿರಿಕಿರಿ ಮತ್ತು ನೋವುಂಟು ಮಾಡಿದೆ. ಶಾಸಕರು ಈ ಕೃತ್ಯ ಎಸಗಿದ್ದಾರೆಯೇ ಅಥವಾ ಇಲ್ಲವೇ ಎಂಬ ನಿರ್ಧಾರಕ್ಕೆ ನಾನು ಬರುವುದಿಲ್ಲ. ಏಕೆಂದರೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್ಡಿಕೆ ಲೇವಡಿ
ಕಮಿಷನ್ ಪಡೆಯುವಾಗಲೇ ಶಾಸಕ ಲಾಕ್, ಇಲ್ಲಿದೆ ಎಕ್ಸ್ಕ್ಲೂಸಿವ್ ವಿಡಿಯೋ

