ಮಂತ್ರಾಲಯ: ರಾಯರ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Edited By:

Updated on: Jun 17, 2025 | 8:58 AM

ಮಂಗಳವಾರ ಬೆಳ್ಳಂಬೆಳಗ್ಗೆಯೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಂತ್ರಾಲಯ ಮಠಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದರು. ನಂತರ ಉತ್ಸವದಲ್ಲಿ ಭಾಗವಹಿಸಿ, ಮಂತ್ರಾಲಯ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಆಶಿರ್ವಾದ ಪಡೆದರು. ಕೇಂದ್ರ ಸಚಿವರ ಮಂತ್ರಾಲಯ ಭೇಟಿಯ ವಿಡಿಯೋ ಇಲ್ಲಿದೆ ನೋಡಿ.

ರಾಯಚೂರು, ಜೂನ್ 17: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಂಗಳವಾರ ಬೆಳಗ್ಗೆ ಮಂತ್ರಾಲಯಕ್ಕೆ ಭೇಟಿ ನೀಡಿದರು. ಮಂತ್ರಾಲಯ ಭೇಟಿ ಬಳಿಕ ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದರು. ನಂತರ ಉತ್ಸವ ಹಾಗೂ ರಾಯರ ಪಾದಪೂಜೆಯಲ್ಲಿ ಭಾಗಿಯಾದರು. ಶ್ರೀಮಠದ ರಥೋತ್ಸವದಲ್ಲಿಯೂ ಕೇಂದ್ರ ಸಚಿವರು ಭಾಗಿಯಾಗಿ, ರಥವನ್ನು ಎಳೆದು ಸೇವೆ ಸಲ್ಲಿಸಿದರು. ಮಂತ್ರಾಲಯ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಆಶಿರ್ವಾದ ಪಡೆದರು. ಈ ವೇಳೆ, ಕೇಂದ್ರ ಸಚಿವ ಜೋಶಿ ಅವರನ್ನು ಶ್ರೀಗಳು ಸನ್ಮಾನಿಸಿ, ಆಶೀರ್ವದಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More