The Kerala Story: ಕುಟುಂಬದ ಸದಸ್ಯರೊಂದಿಗೆ ಹುಬ್ಬಳ್ಳಿಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Updated on: May 09, 2023 | 1:10 PM

ಚಿತ್ರ ವೀಕ್ಷಿಸಿದ ಬಳಿಕ ಮಾತಾಡಿದ ಸಚಿವರು ಚಿತ್ರ ಬಹಳ ನೈಜ್ಯವಾಗಿ ಮೂಡಿಬಂದಿದೆ ಎಂದು ಹೇಳಿದರು.

ಹುಬ್ಬಳ್ಳಿ: ನಿನ್ನೆಯವರೆಗೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಇಂದು ತಮ್ಮ ಕುಟುಂಬ ಸಮೇತ ನಗರದ ಥಿಯೇಟರೊಂದರಲ್ಲಿ ಭಾರಿ ಚರ್ಚೆಯಲ್ಲಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾವನ್ನು ವೀಕ್ಷಸಿದರು. ಚಿತ್ರ ವೀಕ್ಷಿಸಿದ ಬಳಿಕ ಮಾತಾಡಿದ ಸಚಿವರು ಚಿತ್ರ ಬಹಳ ನೈಜ್ಯವಾಗಿ ಮೂಡಿಬಂದಿದೆ ಎಂದು ಹೇಳಿದರು. ಕೇರಳದಲ್ಲಿ (Kerala) ಹೇಗೆ ಬೇರೆ ಧರ್ಮಗಳ ಯುವತಿಯರನ್ನು ಪುಸಲಾಯಿಸಿ ಅವರ ಮನಪರಿವರ್ತನೆ ಮಾಡುವುದರ ಜೊತೆಗೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿ ಇಸ್ಲಾಮಿಕ್ ಸ್ಟೇಟ್ (ISIS) ಸೇರುವಂತೆ ಮಾಡಲಾಗುತ್ತಿದೆ ಅನ್ನೋದನ್ನು ಚಿತ್ರಿಸಲಾಗಿದೆ ಎಂದು ಜೋಶಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More