Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಿಂದ ತುಮಕೂರುವರೆಗೆ ರಾಷ್ಟ್ರೀಯ ಹೆದ್ದಾರಿ ವೀಕ್ಷಿಸಿದ ಕೆಂದ್ರ ಸಚಿವ ವಿ ಸೋಮಣ್ಣ

ನೆಲಮಂಗಲದಿಂದ ತುಮಕೂರುವರೆಗೆ ರಾಷ್ಟ್ರೀಯ ಹೆದ್ದಾರಿ ವೀಕ್ಷಿಸಿದ ಕೆಂದ್ರ ಸಚಿವ ವಿ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ
|

Updated on:Nov 12, 2024 | 1:27 PM

ತುಮಕೂರು ಸಂಸದರಾಗಿರುವ ಸೋಮಣ್ಣ ಅಸಲಿಗೆ ನೆಲಮಂಗಲದಿಂದ ತುಮಕೂರುವರೆಗಿನ ಹೆದ್ದಾರಿಯನ್ನು ವೀಕ್ಷಿಸಿದರು. ಈ ಹೆದ್ದಾರಿಯನ್ನು ದಶಪಥಗಳಲ್ಲಿ ವಿಸ್ತರಿಸುತ್ತಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಆದರೆ ಹೆದ್ದಾರಿ ಕಾಮಗಾರಿ ವಿಳಂಬಗೊಳ್ಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ

ನೆಲಮಂಗಲ: ಕೇಂದ್ರ ಸಚಿವ ವಿ ಸೋಮಣ್ಣ ಕೆಲಸಗಾರ ಅಂತ ಅವರ ರಾಜಕೀಯ ವೈರಿಗಳೂ ಹೇಳುತ್ತಾರೆ. ಇವತ್ತು ಅವರು ಹೆಚ್ಚು ಅಪಘಾತಗಳನ್ನು ಕಾಣುವ ರಾಷ್ಟ್ರೀಯ ಹೆದ್ದಾರಿ 48 ಅನ್ನು ವೀಕ್ಷಿಸಿದರು. ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಬೇಗೂರು, ಕುಲುವನಹಳ್ಳಿ, ಹನುಮಂತಪುರ, ಹಳೆನಿಜಗಲ್ ಮತ್ತು ಬಿಲ್ಲಿನಕೋಟೆ ಗ್ರಾಮಗಳ ಜನರನ್ನು ಭೇಟಿಯಾಗಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು. ದಶಪಥ ಹೆದ್ದಾರಿ ವಿಳಂಬಗೊಳ್ಳುತ್ತಿರವುದಕ್ಕೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದೇವನಹಳ್ಳಿ ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪರಿಶೀಲಿಸಿದ ಅಶ್ವಿನಿ ವೈಷ್ಣವ್: ಸಚಿವ ವಿ ಸೋಮಣ್ಣ ಸಾಥ್

Published on: Nov 12, 2024 01:17 PM