ಕೇಂದ್ರ ಸಚಿವರು ವಕ್ಫ್ ಹೋರಾಟದಲ್ಲಿ ಭಾಗವಹಿಸಿದ್ದು ಪರ್ಯಾಯ ನಾಯಕತ್ವ ಸೃಷ್ಟಿಸಲಲ್ಲ: ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 29, 2024 | 12:44 PM

ಬಸನಗೌಡ ಯತ್ನಾಳ್ ಎಲ್ಲರನ್ನೂ ಟೀಕಿಸುತ್ತಾರೆ, ಜಗಜ್ಯೋತಿ ಬಸವೇಶ್ವರ ಅವರನ್ನೂ ಬಿಡುತ್ತಿಲ್ಲ, ತಮ್ಮ ಹರಕು ಬಾಯಿಯನ್ನು ಅವರು ನಿಲ್ಲಿಸಬೇಕು, ಪಕ್ಷದ ಬ್ಯಾನರ್ ಅಡಿ ಅವರಿಗೆ ಹೋರಾಟ ಮಾಡಲು ಮತ್ತು ಪಕ್ಷದ ಚಿಹ್ನೆಯನ್ನು ಬಳಸಲು ಅವರಿಗೆ ಅನುಮತಿ ನೀಡಿದ್ದು ಯಾರೆಂದು ರೇಣುಕಾಚಾರ್ಯ ಪ್ರಶ್ನಿಸಿದರು.

ಬೆಂಗಳೂರು: ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಷ್ಟ್ರೀಯ ನಾಯಕರು ಮುಲಾಜಿಲ್ಲದೆ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು. ನಗರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದ ಅವರು, ಕೇಂದ್ರದಲ್ಲಿ ಮಂತ್ರಿಗಳಾಗಿರುವ ಶೋಭಾ ಕರಂದ್ಲಾಜೆ ಮತ್ತು ಪ್ರಲ್ಹಾದ್ ಜೋಶಿಯವರು ವಕ್ಫ್ ಹೋರಾಟದಲ್ಲಿ ಭಾಗಿಯಾಗಿದ್ದರೇ ಹೊರತು ಸ್ವಯಂಘೋಷಿತ ಹಿಂದೂ ನಾಯಕ ರಾಜ್ಯದಲ್ಲಿ ಪರ್ಯಾಯ ನಾಯಕತ್ವ ಸೃಷ್ಟಿಸಲಿ ಅಂತಲ್ಲ ಎಂದ ಅವರು ಯತ್ನಾಳ್ ಹೆಸರು ಉಲ್ಲೇಖಿಸದೆ, ಅವರು ಪಕ್ಷದ ರಾಷ್ಟ್ರೀಯ ನಾಯಕರನ್ನು ಪ್ರಶ್ನಿಸುವಷ್ಟು ಉದ್ಧಟತನ ಪ್ರದರ್ಶಿಸುತ್ತಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.