ಬಸನಗೌಡ ಯತ್ನಾಳ್ ಉಚ್ಚಾಟನೆಯಿಂದ ಕಾರ್ಯಕರ್ತರಲ್ಲಿನ ಒಗ್ಗಟ್ಟು ಪ್ರಭಾವಕ್ಕೊಳಗಾಗಿಲ್ಲ: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Apr 17, 2025 | 7:34 PM

ಬಿಜೆಪಿ ನಾಯಕರ ನಡುವೆ ಸಣ್ಣಪುಟ್ಟ ಗೊಂದಲಗಳಿದ್ದರೂ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತಿದ್ದೇವೆ ಮತ್ತು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದು ಹೇಳಿದ ವಿಜಯೇಂದ್ರ ಅವರಿಗೆ, ಬಸನಗೌಡ ಪಾಟೀಲ್ ಯತ್ನಾಳ್ ವಾಪಸ್ಸು ಬರುತ್ತೇನೆ ಅಂದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೀರಾ ಅಂತ ಪತ್ರಕರ್ತರೊಬ್ಬರು ಕೇಳಿದಾಗ ಎರಡೂ ಕೈ ಜೋಡಿಸಿ ಧನ್ಯವಾದ ಅಂತ ಹೇಳಿ ಮುನ್ನಡೆದರು.

ವಿಜಯಪುರ, ಏಪ್ರಿಲ್ 17: ಭರ್ಜರಿ ಸ್ವಾಗತದೊಂದಿಗೆ ವಿಜಯಪುರ ನಗರ ಪ್ರವೇಶಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮದವರು ಕೇಳಬಹುದಾದ ಪ್ರಶ್ನೆಯನ್ನು ಮೊದಲೇ ಗ್ರಹಿಸಿದ್ದರು. ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರನ್ನು ಉಚ್ಚಾಟಿಸಿದ್ದರಿಂದ ಪಕ್ಷಕ್ಕೆ ಲಾಭವಾಗಿದೆ ಅಂತ ತಾನ್ಯಾವತ್ತೂ ಹೇಳಿಲ್ಲ, ಈ ಬೆಳವಣಿಗೆಯು ಕಾರ್ಯಕರ್ತರ ನಡುವಿನ ಒಗ್ಗಟ್ಟಿನ ಮೇಲೆ ಯಾವುದೇ ಪ್ರಭಾವ ಬೀರಿಲ್ಲ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆನ್ನುವುದು ಎಲ್ಲರ ಸಂಕಲ್ಪವಾಗಿದೆ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆ ನಿಟ್ಟಿನೆಡೆ ಕಾರ್ಯೋನ್ಮುಖರಾಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಇದನ್ನೂ ಓದಿ: ಕಳೆದ 20 ತಿಂಗಳಲ್ಲಿ ಸಿದ್ದರಾಮಯ್ಯ ಡೀಸೆಲ್ ಬೆಲೆ ₹ 5.50 ಮತ್ತು ಪೆಟ್ರೋಲ್ ಬೆಲೆ ₹ 3 ಹೆಚ್ಚಿಸಿದ್ದಾರೆ: ವಿಜಯೇಂದ್ರ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.