DKS in Ramanagara; ಗ್ಯಾರಂಟಿಗಳನ್ನು ಈಡೇರಿಸದ ಹೊರತು ಸುರೇಶ್​ಗಾಗಿ ವೋಟು ಕೇಳಲು ರಾಮನಗರಕ್ಕೆ ಬರೋದಿಲ್ಲ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 05, 2023 | 10:53 AM

ವಿಧಾನ ಸಭಾ ಚುನಾವಣೆಯಲ್ಲಿ ತನಗೆ ಕನಕಪುರದಲ್ಲಿ ನೀಡಿದ ಹಾಗೆ ಭರ್ಜರಿ ಬಹುಮತ ನೀಡಿ ಸುರೇಶ್ ರನ್ನು ಗೆಲ್ಲಿಸಬೇಕು ಎಂದು ನೆರೆದ ಜನರನ್ನು ಶಿವಕುಮಾರ್ ಆಗ್ರಹಿಸಿದರು.

ರಾಮನಗರ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಈಗಾಗಲೇ ಲೋಕಸಭಾ ಚುನಾವಣೆ ಮೂಡ್ ನಲ್ಲಿದ್ದಾರೆ ಅಂತ ಕಾಣುತ್ತೆ. ತಮ್ಮ ತವರರು ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತಾಡಿದ ಶಿವಕುಮಾರ್ ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ ಗ್ಯಾರಂಟಿಗಳನ್ನು (Guarantees) ಒಂದೊಂದಾಗಿ ಈಡೇರಿಸುತ್ತಿದೆ, ಶಕ್ತಿ ಯೋಜನೆ ಜಾರಿಗೆ ಬಂದಿದೆ, ಮತ್ತು ಮುಂದಿನ ತಿಂಗಳಿಂದ ಯಾರೂ ವಿದ್ಯುತ್ ಬಿಲ್ ಪಾವತಿಸಬೇಕಿಲ್ಲ ಎಂದು ಹೇಳಿದ ಶಿವಕುಮಾರ್ ಮುಂದಿನ ಕೆಲ ದಿನಗಳಲ್ಲಿ ಎಲ್ಲ ಗ್ಯಾರಂಟಿಗಳನ್ನು ಈಡೇರಿಸದಿದ್ದರೆ ಲೋಕ ಸಭಾ ಚುನಾವಣೆಯಲ್ಲಿ ತನ್ನ ತಮ್ಮ ಡಿಕೆ ಸುರೇಶ್ (DK Suresh) ಪರ ವೋಟು ಕೇಳಲು ಜನರ ಮುಂದೆ ಬರೋದಿಲ್ಲ ಎಂದರು. ವಿಧಾನ ಸಭಾ ಚುನಾವಣೆಯಲ್ಲಿ ತನಗೆ ಕನಕಪುರದಲ್ಲಿ ನೀಡಿದ ಹಾಗೆ ಭರ್ಜರಿ ಬಹುಮತ ನೀಡಿ ಸುರೇಶ್ ರನ್ನು ಗೆಲ್ಲಿಸಬೇಕು ಎಂದು ನೆರೆದ ಜನರನ್ನು ಶಿವಕುಮಾರ್ ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.