AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಮಕ್ಕಳಿಗೆ ಯಾಕಯ್ಯ ಹೆಣ್ಣು ಕೊಡಲ್ಲ? ನಾನು ಮದುವೆಯಾಗಿಲ್ವಾ ಅಂತ ಸಿದ್ದರಾಮಯ್ಯ ಹೇಳಿದಾಗ ಸಭಿಕರಿಗೆ ಜೋರು ನಗು!

ರೈತರ ಮಕ್ಕಳಿಗೆ ಯಾಕಯ್ಯ ಹೆಣ್ಣು ಕೊಡಲ್ಲ? ನಾನು ಮದುವೆಯಾಗಿಲ್ವಾ ಅಂತ ಸಿದ್ದರಾಮಯ್ಯ ಹೇಳಿದಾಗ ಸಭಿಕರಿಗೆ ಜೋರು ನಗು!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 07, 2023 | 6:11 PM

Share

ಕೊರತೆ ಮಳೆಯಿಂದ ರೈತರಿಗೆ ಈ ವರ್ಷ ಎದುರಾಗಿರುವ ಸಂಕಷ್ಟದ ಬಗ್ಗೆ ಮಾತಾಡಿದ ಮುಖ್ಯಮಂತ್ರಿ, ರೈತ ಸಂತೋಷವಾಗಿದ್ದರೆ ಮಾತ್ರ ದೇಶ ಸಂತೋಷವಾಗಿರುತ್ತದೆ ಅವನು ಉದ್ಧಾರವಾದರೆ ದೇಶ ಉದ್ಧಾರವಾದಂತೆ, ಕೃಷಿಯಿಂದಲೇ ದೇಶದ ಜಿಡಿಪಿಗೆ ಹೆಚ್ಚಿನ ದೇಣಿಗೆ ಸಿಗುತ್ತದೆ ಎಂದು ಹೇಳುತ್ತಿದ್ದಂತೆಯೇ ಸಭಿಕರಲ್ಲಿ ಮತ್ತೊಬ್ಬ ವ್ಯಕ್ತಿ ‘ಹೌದಾ ಹುಲಿಯಾ’ ಅಂತ ಜೋರಾಗಿ ಅಬ್ಬರಿಸಿದ!

ಮೈಸೂರು: ಮೈಸೂರಿನಲ್ಲಿ ಇಂದು ಆಯೋಜಿಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ (Basava Jayanti programme) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭಾಷಣ ಮಾಡುವಾಗ ಸಭಿಕರಲ್ಲಿ ಒಬ್ಬರು ರೈತರ ಮಕ್ಕಳಿಗೆ (children of farmers) ಹೆಣ್ಣು ಕೊಡುತ್ತಿಲ್ಲ ಎಂದು ಹೇಳಿದರು. ಅವರ ಮಾತಿಗೆ ರೇಗಿದ ಸಿದ್ದರಾಮಯ್ಯ, ಹಾಗೆಲ್ಲ ಸುಳ್ಳಾಡಬಾರದು, ರೈತರ ಮಕ್ಕಳಿಗೆ ಹೆಣ್ಣ್ಯಾಕೆ ಕೊಡಲ್ಲ ಅಂತ ಪ್ರಶ್ನಿಸಿದರು. ರೈತರ ಹೆಣ್ಣು ಮಕ್ಕಳು, ಗಂಡು ಮಕ್ಕಳು ಯಾರೂ ಮದುವೆ ಆಗಿಲ್ವಾ? ಓದಿದರೂ ನಿರುದ್ಯೋಗಿಯಾಗುರುವ ಯುವಕನಿಗೆ ಹೆಣ್ಣು ಕೊಡಲ್ಲ ಎಂದ ಸಿದ್ದರಾಮಯ್ಯ, ನಾನೂ ರೈತನ ಮಗನೇ ನಂಗೆ ಮದುವೆಯಾಗಿಲ್ವಾ ಅಂತ ಹೇಳಿದಾಗ ನೆರೆದಿದ್ದ ಜನರೆಲ್ಲ ನಕ್ಕರು. ಕೊರತೆ ಮಳೆಯಿಂದ ರೈತರಿಗೆ ಈ ವರ್ಷ ಎದುರಾಗಿರುವ ಸಂಕಷ್ಟದ ಬಗ್ಗೆ ಮಾತಾಡಿದ ಮುಖ್ಯಮಂತ್ರಿ, ರೈತ ಸಂತೋಷವಾಗಿದ್ದರೆ ಮಾತ್ರ ದೇಶ ಸಂತೋಷವಾಗಿರುತ್ತದೆ ಅವನು ಉದ್ಧಾರವಾದರೆ ದೇಶ ಉದ್ಧಾರವಾದಂತೆ, ಕೃಷಿಯಿಂದಲೇ ದೇಶದ ಜಿಡಿಪಿಗೆ ಹೆಚ್ಚಿನ ದೇಣಿಗೆ ಸಿಗುತ್ತದೆ ಎಂದು ಹೇಳುತ್ತಿದ್ದಂತೆಯೇ ಸಭಿಕರಲ್ಲಿ ಮತ್ತೊಬ್ಬ ವ್ಯಕ್ತಿ ‘ಹೌದಾ ಹುಲಿಯಾ’ ಅಂತ ಜೋರಾಗಿ ಅಬ್ಬರಿಸಿದ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.