AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮುಸ್ಲಿಮೇತರ ಸಮುದಾಯಗಳು ಒಂದುಗೂಡಿದ ಹಾಗೆ ಚನ್ನಪಟ್ಟಣದಲ್ಲಿ ಆಗಲಿಲ್ಲ: ಅಶೋಕ

ಮಹಾರಾಷ್ಟ್ರದಲ್ಲಿ ಮುಸ್ಲಿಮೇತರ ಸಮುದಾಯಗಳು ಒಂದುಗೂಡಿದ ಹಾಗೆ ಚನ್ನಪಟ್ಟಣದಲ್ಲಿ ಆಗಲಿಲ್ಲ: ಅಶೋಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 25, 2024 | 2:43 PM

Share

ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆ ಫಲಿತಾಂಶಗಳನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪೋಸ್ಟ್​ ಮಾರ್ಟಮ್ ಮಾಡುವ ಕೆಲಸ ಅರಂಭಿಸಿದ್ದಾರೆ. ಮುಸ್ಲಿಂ ಸಮುದಾಯದ ಹಾಗೆ ಬೇರೆ ಸಮುದಾಯದ ಮತದಾರರು ಸಹ ಜೆಡಿಎಸ್ ಕೈ ಬಿಟ್ಟರು, ಮಹಾರಾಷ್ಟ್ರದಲ್ಲಿ ನಡೆದಂತೆ ಇಲ್ಲಿ ನಡೆಯಲಿಲ್ಲ ಎಂದು ಅಶೋಕ ಹೇಳಿದರು.

ಬೆಂಗಳೂರು: ನಗರದಲ್ಲಿ ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ವಿರೋಧ ಪಕ್ಷದ ನಾಯಕ ಅರ್ ಅಶೋಕ ಅವರು, ಚನ್ನಪಟ್ಟಣನದಲ್ಲಿ ಜೆಡಿಎಸ್ ಅಭ್ಯರ್ಥಿ ಸೋತಿರುವುದಕ್ಕೆ ಮುಸ್ಲಿಂ ಮರದಾರರರು ವಿಮುಖರಾಗಿದ್ದು ಕಾರಣವಾಯಿತು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿರುವುದು ಸುಳ್ಳಲ್ಲ, ಬೂತ್​ಗಳಲ್ಲಿ ನಡೆದ ಮತದಾನ ನಡೆದ ಪ್ರಕ್ರಿಯೆ ಗಮನಿಸಿದಾಗ ಅದು ಗೊತ್ತಾಗುತ್ತದೆ, ಮುಸ್ಲಿಂ ಪ್ರಾಬಲ್ಯದ ಬೂತ್​ಗಳಲ್ಲಿ ನಿಖಿಲ್​ಗೆ ಐದ್ಹತ್ತು ವೋಟುಗಳು ಮಾತ್ರ ಸಿಕ್ಕಿವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಪಿಎಲ್ ಕಾರ್ಡುಗಳನ್ನು ಮೊದಲಿದ್ದ ಹಾಗೆ ಬಡವರಿಗೆ ಹಿಂತಿರುಗಿಸದಿದ್ದರೆ ಉಗ್ರ ಹೋರಾಟ: ಆರ್​. ಅಶೋಕ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.