AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಆಗುವುದು ಮಿಸ್ ಮಾಡಿಕೊಂಡ ವಿಜಯೇಂದ್ರ ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸಲು ಪ್ರಯತ್ನಿಸುತ್ತಾರಂತೆ

ಮಂತ್ರಿ ಆಗುವುದು ಮಿಸ್ ಮಾಡಿಕೊಂಡ ವಿಜಯೇಂದ್ರ ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸಲು ಪ್ರಯತ್ನಿಸುತ್ತಾರಂತೆ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 05, 2021 | 8:45 PM

ವಿಜಯೇಂದ್ರ ಅವರು, ತಾನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷನಾಗಿ ರಾಜ್ಯದಾದ್ಯಂತ ಸುತ್ತಿ ಪಕ್ಷದ ಸಂಘಟನೆ ಮಾಡಬೇಕಿರುವುದರಿಂದ ಎಲ್ಲ ಭಾಗಗಳಿಗೆ ಹೋಗುವುದು ಅನಿವಾರ್ಯವಾದರೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಳೆ ಮೈಸೂರು ಭಾಗದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಹೇಳಿರಿವುದರಿಂದ ಅದಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುವುದಾಗಿ ಹೇಳಿದರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಿಶ್ಚಿತವಾಗಿಯೂ ಸಚಿವರಾಗುತ್ತಾರೆ ಎಂದು ಭಾವಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಗ ಬಿ ವೈ ವಿಜಯೇಂದ್ರ ಅವರು ಬಸ್ ಮಿಸ್ ಮಾಡಿಕೊಂಡಿರುವ ಬಗ್ಗೆ ವಿಚಲಿತರೇನೂ ಅಗಿಲ್ಲ. ರಾಜ್ಯ ಉಪಾಧ್ಯಕ್ಷನ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ತನ್ನ ಮೇಲೆ ಹೊರೆಸಿದ್ದಾರೆ, ಅದನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಹಿಸುವುದಾಗಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಗುರುವಾರದಂದು ಸುದ್ದಿಗಾರರೊಂದಿಗೆ ಮಾತಾಡಿದ ವಿಜಯೇಂದ್ರ, ಹಾನಗಲ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ವರಿಷ್ಠರು ಮತ್ತು ರಾಜ್ಯ ಬಿಜೆಪಿ ಘಟಕ ನಿರ್ಧರಿಸುತ್ತದೆ ಎಂದು ಹೇಳಿದರು. ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸಲು ಹೆಚ್ಚಿನ ಒತ್ತು ನೀಡಬೇಕೆಂದು ವರಿಷ್ಠರ ಸೂಚನೆ ನೀಡಿರುವ ಬಗ್ಗೆ ಕೇಳಿದಾಗ ವಿಜಯೇಂದ್ರ ಅವರು, ತಾನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷನಾಗಿ ರಾಜ್ಯದಾದ್ಯಂತ ಸುತ್ತಿ ಪಕ್ಷದ ಸಂಘಟನೆ ಮಾಡಬೇಕಿರುವುದರಿಂದ ಎಲ್ಲ ಭಾಗಗಳಿಗೆ ಹೋಗುವುದು ಅನಿವಾರ್ಯವಾದರೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಳೆ ಮೈಸೂರು ಭಾಗದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಹೇಳಿರಿವುದರಿಂದ ಅದಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುವುದಾಗಿ ಹೇಳಿದರು.

ಕಳೆದ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ವಿಜಯೇಂದ್ರ ಅವರು ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸಬೇಕೆಂದುಕೊಂಡಿದ್ದರು. ಆದರೆ, ಪಕ್ಷ ಅವಕಾಶ ನೀಡಿರಲಿಲ್ಲ. ಕ್ಷೇತ್ರದ ಮೇಲೆ ಇನ್ನೂ ಪ್ರೀತಿ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಅವರು, ವರುಣಾ ಕ್ಷೇತ್ರದ ಜನರೇ ತಮ್ಮನ್ನು ಮೊದಲ ಗುರುತಿಸಿದ್ದು, ಹಾಗಾಗಿ ಕ್ಷೇತ್ರದ ಮೇಲಿನ ಪ್ರೀತಿ, ಅಭಿಮಾನ ಯಾವತ್ತೂ ಕಡಿಮೆಯಾಗದು ಎಂದರು. ಮುಂದಿನ ಚುನಾವಣೆಯಲ್ಲಿ ಪಕ್ಷ ಬಯಸಿದರೆ ಮಾತ್ರ ತಾನು ಅಲ್ಲಿಂದ ಸ್ಪರ್ಧಿಸುವುದಾಗಿ ಹೇಳಿದರು.

ಇದನ್ನೂ ಓದಿ: Viral Video: ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲೇ ಯೋಗಾಸನ ಮಾಡಿದ ಯುವತಿ; ಶಾಕಿಂಗ್ ವಿಡಿಯೋ ಇಲ್ಲಿದೆ