ಫೆಂಗಲ್ ಎಫೆಕ್ಟ್: ನೆಲಮಂಗಲದಲ್ಲಿ ನಿರಂತರ ಮಳೆ ಜನಜೀವನ ಅಸ್ತವ್ಯಸ್ತ, ಶಾಲಾಮಕ್ಕಳಿಗೆ ತೊಂದರೆ

ಅರುಣ್​ ಕುಮಾರ್​ ಬೆಳ್ಳಿ

Updated on: Dec 03, 2024 | 11:51 AM

ಬೆಂಗಳೂರು ಮತ್ತು ನೆಲಮಂಗಲದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಹಾಗಾಗಿ ಮಕ್ಕಳು ನೆನೆಯುತ್ತಾ, ಚಳಿಯಲ್ಲಿ ನಡುಗುತ್ತ ಶಾಲೆಗಳಲ್ಲಿ ಹೋದರು. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ನಾಳೆ ಸಾಯಂಕಾಲದವರೆಗೆ ಫೆಂಗಲ್ ಚಂಡಮಾರುತ ತನ್ನ ಅಟ್ಟಹಾಸ ಮೆರೆಯಲಿದೆ.

ನೆಲಮಂಗಲ: ನಿಧಾನತಿಯಲ್ಲಿ ಚಲಿಸುತ್ತಿರುವ ವಾಹನಗಳು, ಮೈಮೇಲೆ ಜರ್ಕಿನ್ ಎಳೆದುಕೊಂಡು ತಮ್ಮ ತಮ್ಮ ಕಚೇರಿಗಳನ್ನು ತಲುಪುವ ಧಾವಂತದಲ್ಲಿರುವ ದ್ವಿಚಕ್ರವಾಹನ ಸವಾರರು, ರಸ್ತೆಗಳ ಮೇಲೆ ಕೊಡೆಗಳನ್ನು ಬಿಚ್ಚಿಕೊಂಡು ಓಡಾಡುತ್ತಿರುವ ಜನ, ಮಳೆ ಹೆಚ್ಚಾದಾಗ ಫ್ಲೈಓವರ್, ಶಾಪು, ಹೋಟೆಲ್, ಬಸ್ ಸ್ಟಾಪು ಮತ್ತು ದೊಡ್ಡ ದೊಡ್ಡ ಮರಗಳ ಕೆಳಗೆ ಆಶ್ರಯ ಪಡೆಯುತ್ತಿರುವ ಕೊಡೆಯಿಲ್ಲದವರು-ಬೆಂಗಳೂರು ಹೊರವಲಯದ ನೆಲಮಂಗಲ ಮತ್ತು ಬೆಂಗಳೂರು ನಗರದಲ್ಲಿ ಕಾಣುತ್ತಿರುವ ಸಾಮಾನ್ಯ ದೃಶ್ಯಗಳಿವು. ಫೆಂಗಲ್ ಎಫೆಕ್ಟ್ ಜನರನ್ನು ಇವತ್ತು ಸಹ ಕಾಡುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.