AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತ ಗುಂಪಿನ ದಾಳಿಯಲ್ಲಿ ಏನೆಲ್ಲ ಹಾಳಾಗಿವೆ ಗೊತ್ತಾ?

ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತ ಗುಂಪಿನ ದಾಳಿಯಲ್ಲಿ ಏನೆಲ್ಲ ಹಾಳಾಗಿವೆ ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ
|

Updated on:May 25, 2024 | 12:57 PM

ಗಲಭೆಯಲ್ಲಿ 11 ಪೊಲೀಸರು ಸಹ ಗಾಯಗೊಂಡಿದ್ದಾರೆ ಮತ್ತು ಅವರಿಗೆ ಚಿಕಿತ್ಸೆ ಒದಗಿಸಲಾಗದೆ. ಇಂಥ ಗಲಭೆಗಳು ನಡೆಯುವಾಗ ಪೊಲೀಸರು ಏನೂ ಮಾಡಲಾಗಲ್ಲವೇ? ಅಶ್ರವಾಯು ಸಿಡಿಸುವುದು ಅಥವಾ ಲಾಠಿ ಚಾರ್ಜ್ ಮಾಡಬೇಕಾದರೆ ಅವರಿಗೆ ಮೇಲಿಂದ ಆದೇಶ ಬರಬೇಕು. ಲಾಕಪ್ ಡೆತ್ ತನಿಖೆಯಾಗಬೇಕು ಅದು ಬೇರೆ ವಿಷಯ, ಆದರೆ ಉದ್ರಿಕ್ತ ಗುಂಪು ಹೀಗೆ ಪೊಲೀಸ್ ಠಾಣೆಯ ಮೇಲೆಯೇ ದಾಳಿ ನಡೆಸುವುದು ಯಾವ ಕಾರಣಕ್ಕೂ ಸಮರ್ಥನೀಯವಲ್ಲ.

ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪ್ರಟ್ಟಣದಲ್ಲಿ (Channagiri) ನಿನ್ನೆ ಲಾಕಪ್ ಡೆತ್ (lock up death) ಸಂಭವಿಸಿದೆ ಎಂಬ ಆರೋಪ ಕೇಳಿಬರುತ್ತಿದೆ. ನಿನ್ನೆ ವ್ಯಕ್ತಿಯೊಬ್ಬನನ್ನು ವಿಚಾರಣೆಗೆಂದು ಪೊಲೀಸರು ಇಲ್ಲಿ ಕಾಣುತ್ತಿರುವ ಪೊಲೀಸ್ ಠಾಣೆಗೆ ಕರೆತಂದಾಗ ಅವನು ಕುಸಿದುಬಿದ್ದು (collapsed) ಸಾವನ್ನಪ್ಪಿದ್ದಾನೆ. ಪೊಲೀಸರು ಬಂಧಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಕಾರಣ ಅವನು ಸತ್ತಿದ್ದಾನೆ ಎಂದು ಅರೋಪಿಸಿ ಸುಮಾರು ನೂರು ಜನ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಟಿವಿ9 ದಾವಣೆಗೆರೆ ವರದಿಗಾರ ಘಟನೆಯ ಸಂಪೂರ್ಣ ಚಿತ್ರಣ ನೀಡಿದ್ದಾರೆ. ಈ ಪೊಲೀಸ್ ಠಾಣೆ ಪಕ್ಕದಲ್ಲೇ ಡಿವೈಎಸ್​​ಪಿ ಕಚೇರಿ ಇದ್ದು ಆವರಣದಲ್ಲಿದ್ದ ಪೊಲೀಸ್ ವಾಹನಗಳನ್ನು ಉದ್ರಿಕ್ತ ಗುಂಪು ಜಖಂಗೊಳಿಸಿದೆ. ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದ್ದು ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಆವರಣದಲ್ಲಿದ್ದ ದ್ವಿಚಕ್ರವಾಹನ, ಎಸಿ ಮತ್ತು ಧ್ವಜಕಟ್ಟೆಯ ಮೇಲೂ ಗುಂಪು ದಾಳಿ ಮಾಡಿದೆ. ಗಲಭೆಯಲ್ಲಿ 11 ಪೊಲೀಸರು ಸಹ ಗಾಯಗೊಂಡಿದ್ದಾರೆ ಮತ್ತು ಅವರಿಗೆ ಚಿಕಿತ್ಸೆ ಒದಗಿಸಲಾಗಿದೆ. ಇಂಥ ಗಲಭೆಗಳು ನಡೆಯುವಾಗ ಪೊಲೀಸರು ಏನೂ ಮಾಡಲಾಗಲ್ಲವೇ? ಅಶ್ರವಾಯು ಸಿಡಿಸುವುದು ಅಥವಾ ಲಾಠಿ ಚಾರ್ಜ್ ಮಾಡಬೇಕಾದರೆ ಅವರಿಗೆ ಮೇಲಿಂದ ಆದೇಶ ಬರಬೇಕು. ಲಾಕಪ್ ಡೆತ್ ತನಿಖೆಯಾಗಬೇಕು ಅದು ಬೇರೆ ವಿಷಯ, ಆದರೆ ಉದ್ರಿಕ್ತ ಗುಂಪು ಹೀಗೆ ಪೊಲೀಸ್ ಠಾಣೆಯ ಮೇಲೆಯೇ ದಾಳಿ ನಡೆಸುವುದು ಯಾವ ಕಾರಣಕ್ಕೂ ಸಮರ್ಥನೀಯವಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೋಲಾರ ಲಾಕಪ್ ​ಡೆತ್: PSI ಮತ್ತು ಕಾನ್ಸ್​​ಟೇಬಲ್​ಗಳ ವಿರುದ್ಧ ಎಫ್​ಐಆರ್​ ದಾಖಲು

Published on: May 25, 2024 12:12 PM