ಸೋಲುವ ಭೀತಿಯಿಂದ ದಿಕ್ಕುತಪ್ಪಿದಂತಾಗಿರುವ ಸಿದ್ದರಾಮಯ್ಯ ಕ್ಷೇತ್ರಗಳನ್ನು ಹುಡುಕಿಕೊಂಡು ಅಲೆದಾಡುತ್ತಿದ್ದಾರೆ: ಆರ್ ಅಶೋಕ, ಸಚಿವರು
ಸಿದ್ದರಾಮಯ್ಯ ಚಾಮುಂಡೇಶ್ವರಿಯನ್ನು ಅಭಿವೃದ್ಧಿ ಮಾಡಿರುವುದಾಗಿ ಹೇಳಿದರೂ ಅಲ್ಲಿ ಅವಮಾನಕರ ಸೋಲು ಅನುಭವಿಸುತ್ತಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ದಿಕ್ಕು ಕಾಣದೆ ಕ್ಷೇತ್ರಗಳನ್ನು ಅರಸಿಕೊಂಡು ಓಡಾಡುತ್ತಿರುವ ಒಬ್ಬ ವಿಫಲ ರಾಜಕಾರಣಿ ಎಂದು ಕಂದಾಯ ಮಂತ್ರಿ ಆರ್ ಅಶೋಕ (R Ashoka) ಅವರು ಬೆಂಗಳೂರಲ್ಲಿ ಇಂದು ಹೇಳಿದರು. ಸಿದ್ದರಾಮಯ್ಯ ಚಾಮುಂಡೇಶ್ವರಿಯನ್ನು ಅಭಿವೃದ್ಧಿ ಮಾಡಿರುವುದಾಗಿ ಹೇಳಿದರೂ ಅಲ್ಲಿ ಅವಮಾನಕರ ಸೋಲು ಅನುಭವಿಸುತ್ತಾರೆ. ಬಾದಾಮಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾಗಿ ಹೇಳುತ್ತಾರೆ ಆದರೆ ಪುನರಾಯ್ಕೆಗೊಳ್ಳಲಾರೆ ಎಂಬ ಭೀತಿಯಿಂದ ಕೋಲಾರಕ್ಕೆ ಪಲಾಯನ ಮಾಡಿದ್ದಾರೆ. ಬೇರೆ ನಾಯಕರಾದ ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸದಾ ಒಂದೇ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ. ಸಿದ್ದರಾಮಯ್ಯನವರಲ್ಲಿ ಆತ್ಮವಿಶ್ವಾಸದ ಕೊರತೆ ಎದ್ದುಕಾಣುತ್ತಿದೆ ಎಂದು ಸಚಿವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

