AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಕಟಾವು ಮಾಡಿ ಒಳಗಲು ಹಾಕಿದ್ದ ಭತ್ತ ನಾಶ, ರೈತರು ಕಂಗಾಲು

ರಾಯಚೂರಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಕಟಾವು ಮಾಡಿ ಒಳಗಲು ಹಾಕಿದ್ದ ಭತ್ತ ನಾಶ, ರೈತರು ಕಂಗಾಲು

ಅರುಣ್​ ಕುಮಾರ್​ ಬೆಳ್ಳಿ
|

Updated on:May 14, 2025 | 12:51 PM

Share

ಸುಲ್ತಾನಪುರದ ಸ್ಥಿತಿ ಹೇಗಾಗಿದೆ ಅಂತ ನೋಡಿ. ಊರೊಳಗೆ ನೀರು ಹರಿದು ಬಂದಿದೆ ಮತ್ತು ಕೆಲ ಮನೆಗಳು ಮತ್ತು ಗುಡಿಗಳು ಜಲಾವೃಗೊಂಡಿವೆ. ವಿಡಿಯೋದಲ್ಲಿ ಕಾಣುತ್ತಿರುವ ಭತ್ತ ರೈತರಾದ ಹನುಮಂತ, ರಾಮಣ್ಣ ಲಕ್ಷ್ಮಣ, ನಾಗೇಶ್ ಮತ್ತು ತಿಪ್ಪಣ್ಣ ಎನ್ನುವವರಿಗೆ ಸೇರಿದ್ದು ಎನ್ನಲಾಗಿದೆ. ಊರಿನ ರಸ್ತೆಗಳಲ್ಲೂ ನೀರು ಹೊಳೆಯಂತೆ ಹರಿಯುತ್ತಿದೆ. ಬಿಸಿಲ ತಾಪದಿಂದ ಜನ ಎಷ್ಟೇ ಬೇಸತ್ತಿದ್ದರೂ ಇಂಥ ಅವಕಾಳಿ ಮಳೆಯನ್ನು ಹೇಗೆ ಸ್ವಾಗತಿಸಿಯಾರು?

ರಾಯಚೂರು, ಮೇ 14: ರಾಯಚೂರು ಜಿಲ್ಲೆಯ ಹಲವಾರು ಭಾಗಗಳಲ್ಲಿ ನಿನ್ನೆ ಸುರಿದ ಮಳೆ ರೈತರನ್ನು ಸಂಕಷ್ಟಕ್ಕೀಡು ಮಾಡಿದೆ. ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸುಲ್ತಾನಪುರ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ನಿನ್ನೆ ಸಾಯಂಕಾಲ ಭಾರೀ ಮಳೆಯಾಗಿರುವುದರಿಂದ ರೈತರು ಕಟಾವು ಮಾಡಿ ಒಣಗಲು ಹಾಕಿದ್ದ ಭತ್ತ (paddy) ಮಳೆನೀರಿಗೆ ಕೊಚ್ಚಿಕೊಂಡು ಹೋಗಿದೆ, ಕುಪ್ಪೆಯಲ್ಲಿ ಭತ್ತ ಉಳಿದಿದ್ದರೂ ಅದು ಹಾಳಾದಂತೆಯೇ. ಕಷ್ಟಪಟ್ಟು ಬೆಳೆದ ಭತ್ತ ಹೀಗೆ ನೀರುಪಾಲಾಗಿದ್ದು ಅನ್ನದಾತರನ್ನು ಕಂಗಾಲಾಗಿಸಿದೆ. ನಿನ್ನೆ ರಾಜ್ಯದ ಬಹುತೇಕ ಭಾಗಗಳಲ್ಲಿ ಅಕಾಲಿಕ ಮತ್ತು ಉತ್ತರ ಕರ್ನಾಟಕದವರು ಹೇಳುವಂತೆ ಅವಕಾಳಿ ಮಳೆಯಾಗಿದೆ.

ಇದನ್ನೂ ಓದಿ:ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಹುಬ್ಬಳ್ಳಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 14, 2025 11:10 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More