AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆದ ವಿಡಿಯೋದಲ್ಲಿ, ಶಾಲೆಯ ಅಧ್ಯಕ್ಷರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರ ಗುಂಪು ಪ್ರಾಂಶುಪಾಲರ ಕಚೇರಿಗೆ ತೆರಳಿ ಪ್ರಾಂಶುಪಾಲಕಿಯನ್ನು ಕುರ್ಚಿಯಿಂದ ಬಲವಂತವಾಗಿ ಹೊರಹಾಕಿದ್ದಾರೆ. ಇದಲ್ಲದೇ ಅದೇ ಸಮಯದಲ್ಲಿ ಹೊಸ ಪ್ರಾಂಶುಪಾಲರನ್ನು ನೇಮಕ ಮಾಡಿ ಚಪ್ಪಾಳೆ ತಟ್ಟುತ್ತಾ ಸಂಭ್ರಮಿಸಿದ್ದಾರೆ. ಮಕ್ಕಳಿಗೆ ಶಿಸ್ತಿನ ಪಾಠ ಕಲಿಸಬೇಕಾದ ಶಾಲೆಯಲ್ಲಿ ಈರೀತಿಯ ವರ್ತನೆ ಕಂಡು ಬಂದಿದ್ದು,ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಅಕ್ಷತಾ ವರ್ಕಾಡಿ
|

Updated on:Jul 06, 2024 | 2:02 PM

Share

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಬಿಷಪ್ ಜಾನ್ಸನ್ ಗರ್ಲ್ಸ್ ಹೈಸ್ಕೂಲ್​​ನ ಪ್ರಾಂಶುಪಾಲಕಿ ಪಾರುಲ್ ಸೊಲೊಮನ್ ಅವರನ್ನು ಆಡಳಿತ ಮಂಡಳಿಯು ಬಲವಂತವಾಗಿ ಹೊರದಬ್ಬಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ಹುಟ್ಟುಹಾಕಿದೆ. ವೈರಲ್​​ ಆದ ವಿಡಿಯೋದಲ್ಲಿ, ಪ್ರಾಂಶುಪಾಲಕಿ ಪಾರುಲ್ ಅವರನ್ನು ಕುರ್ಚಿಯಿಂದ ಬಲವಂತವಾಗಿ ಹೊರಹಾಕಿ, ಅದೇ ಸ್ಥಾನಕ್ಕೆ ಹೊಸ ಪ್ರಾಂಶುಪಾಲರನ್ನು ನೇಮಕ ಮಾಡಿರುವುದು ಕಂಡುಬಂದಿದೆ. ಮಕ್ಕಳಿಗೆ ಶಿಸ್ತಿನ ಪಾಠ ಕಲಿಸಬೇಕಾದ ಶಾಲೆಯಲ್ಲಿ ಈರೀತಿಯ ವರ್ತನೆ ಕಂಡು ಬಂದಿದ್ದು, ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲೆಯ ಅಧ್ಯಕ್ಷರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರ ಗುಂಪು ಪ್ರಾಂಶುಪಾಲರ ಕಚೇರಿಗೆ ಪ್ರವೇಶಿಸಿ ಆಕೆಯ ಕುರ್ಚಿಯನ್ನು ಖಾಲಿ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಒಪ್ಪದ ಪ್ರಾಂಶುಪಾಲಕಿಯನ್ನು ಬಲವಂತವಾಗಿ ಎಳೆದ್ಯೊಯ್ದು ಹೊರಹಾಕಲಾಗಿದೆ. ಬಳಿಕ ಹೊಸ ಪ್ರಾಶುಂಪಾಲರನ್ನು ನೇಮಕ ಮಾಡಲಾಗಿದೆ. ಈ ಘಟನೆಯು ಶಿಕ್ಷಣದ ಸ್ಥಿತಿ ಮತ್ತು ಶಾಲಾ ಆಡಳಿತಗಾರರ ವರ್ತನೆಯ ಬಗ್ಗೆ ಬಿಸಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಾಶುಂಪಾಲಕಿ ಪಾರುಲ್ ಸೊಲೊಮನ್ ಕರ್ನಲ್ ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಉಡುಪಿಯಲ್ಲಿ ಭಾರಿ ಮಳೆಗೆ ಮೊದಲ ಬಲಿ; ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸುರುಗಟ್ಟಿ ಸಾವು

Published On - 1:51 pm, Sat, 6 July 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್