ಫೋನ್ ಚೆಕ್​ ಮಾಡುವಂತೆ ಉಪಲೋಕಾಯುಕ್ತ ಜಡ್ಜ್ ಸೂಚನೆ: ಕಕ್ಕಾಬಿಕ್ಕಿಯಾದ ಪಂಚಾಯ್ತಿ ಸಿಬ್ಬಂದಿ

ಅಕ್ರಮ ನಡೆದಿರುವ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿಗೆ ಇಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ದಿಢೀರ್​ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಆನ್ ಲೈನ್​ ಮೂಲಕ ಲಂಚ ತೆಗೆದುಕೊಳ್ಳುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಸಿಬ್ಬಂದಿಗಳ ಮೊಬೈಲ್ ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಫೋನ್ ಚೆಕ್​ ಮಾಡುವಂತೆ ಉಪಲೋಕಾಯುಕ್ತ ಜಡ್ಜ್ ಸೂಚನೆ: ಕಕ್ಕಾಬಿಕ್ಕಿಯಾದ ಪಂಚಾಯ್ತಿ ಸಿಬ್ಬಂದಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 09, 2024 | 6:29 PM

ಆನೇಕಲ್, ಆಗಸ್ಟ್​ 09: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿಗೆ ಇಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ (K.N.Phaneendra) ದಿಢೀರ್​ ಭೇಟಿ ನೀಡಿದ್ದಾರೆ. ಪಂಚಾಯತಿಯಲ್ಲಿ ಹಲವು ಅಕ್ರಮ ನಡೆದಿರುವ ಹಿನ್ನೆಲೆ ಭೇಟಿ ನೀಡಿ ಕಡತಗಳ ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಅಧಿಕಾರಿಗಳು ಸೂಕ್ತ ದಾಖಲೆ ನೀಡಿರಲಿಲ್ಲ. ಬೋರ್​ವೆಲ್, ನಕಲಿ ಖಾತೆ ಸೇರಿದಂತೆ ಹಲವು ಅಕ್ರಮ ನಡೆದಿತ್ತು. ಆನ್ ಲೈನ್​ ಮೂಲಕ ಲಂಚ ತೆಗೆದುಕೊಳ್ಳುತ್ತಿರುವ ಬಗ್ಗೆ ಪರಿಶೀಲನೆಗಾಗಿ ಅಧಿಕಾರಿಗಳಿಗೆ ಸಿಬ್ಬಂದಿಗಳ ಮೊಬೈಲ್ ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹಾಜರಾತಿ ಬುಕ್, ದಾಖಲೆಗಳನ್ನ ಸರಿಯಾದ ಪ್ರೋಸಿಜರ್ ಮಾಡಿಲ್ಲ. ಹಾಗಾಗಿ ಅಧಿಕಾರಿಗಳಿಗೆ ಉಪಲೋಕಾಯುಕ್ತ ಫಣೀಂದ್ರ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಚೇರಿಗೆ ಬರುವಾಗ ಅಧಿಕಾರಿಗಳ ಬಳಿ ಹಣ ಎಷ್ಟಿತ್ತು ಎನ್ನುವದನ್ನ ಬುಕ್​ನಲ್ಲಿ ಎಂಟ್ರಿ ಮಾಡಿಲ್ಲ. ಕಚೇರಿಗೆ ಬರುವಾಗ ಹೋಗುವಾಗ ಹಣ ಎಷ್ಟಿದೆ ಎಂದು ಎಂಟ್ರಿ ಮಾಡಬೇಕು. ನಿನ್ನೆ ದಾಳಿ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ‌ ಬಳಿ ಹೆಚ್ಚುವರಿ ಹಣ ಕಂಡು ಬಂದಿತ್ತು.

ಪಂಚಾಯತಿಗೆ ಸಂಬಂಧ ಪಟ್ಟ ಅಂಗಡಿಗೆ ಬಾಡಿಗೆ ಕಲೆಕ್ಟ್ ಮಾಡಿಲ್ಲ. ಲಕ್ಷಾಂತರ ರೂ. ಬಾಡಿಗೆ ಹಣ ಬಾಕಿ ಇದೆ. ಅಂತವರ ವಿರುದ್ಧ ನೋಟಿಸ್ ಕೊಟ್ಟು ಕ್ರಮ ಆಗಿಲ್ಲ. ಅಧಿಕಾರಿಗಳು ಶಾಮೀಲಾಗಿರುವುದು ಕಾಣುತ್ತಿದೆ. ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ಯಾಕೆ ಮಾಡಿಲ್ಲ. ವ್ಯಾಪಾರಿಗಳಿಗಾಗಿ ಸೂಕ್ತ ವ್ಯವಸ್ಥೆ ಮಾಡಿಲ್ಲ. ಮಾಡಿದ್ರೆ ಪಂಚಾಯತಿ ತೆರಿಗೆ ಹಣ ಬರುತ್ತಿತ್ತು. ಜನಪ್ರತಿನಿಧಿಗಳ ಒತ್ತಡ ಅಂತ ಹೇಳಿದ ಪಿಡಿಓ ರಮೇಶ್​ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ