ಅಪ್ಪ ಇದ್ದಿದ್ರೆ ಹೆಮ್ಮೆ ಪಡುತ್ತಿದ್ರು: ಕಾಶಿನಾಥ್ ಮಗನ ಸಿನಿಮಾ ನೋಡಿ ಹೊಗಳಿದ ಉಪೇಂದ್ರ

Updated on: Feb 21, 2025 | 8:52 PM

‘ಮೊದಲ ಬಾರಿ ಹೃದಯತುಂಬಿ, ಪ್ರಮಾಣಿಕವಾಗಿ ಹೇಳುತ್ತಿದ್ದೇನೆ. ಇಂಥ ಒಂದು ಟೀಮ್ ಜೊತೆ ನಿಂತುಕೊಳ್ಳಲು ಹೆಮ್ಮೆ ಎನಿಸುತ್ತಿದೆ’ ಎಂದು ಉಪೇಂದ್ರ ಅವರು ಹೇಳಿದ್ದಾರೆ. ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಈ ಸಿನಿಮಾಗೆ ಹೀರೋ ಆಗಿದ್ದಾರೆ.

‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಕಾಶಿನಾಥ್ ಪುತ್ರ ಅಭಿಮನ್ಯು ನಟಿಸಿದ್ದಾರೆ. ಅವರಿಗೆ ನಟಿ ಅಪೂರ್ವಾ ಜೋಡಿ ಆಗಿದ್ದಾರೆ. ಟ್ರೇಲರ್​ ರಿಲೀಸ್ ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಮಾತನಾಡಿದ್ದಾರೆ. ಈಗಾಗಲೇ ಸಿನಿಮಾ ನೋಡಿ ಉಪೇಂದ್ರ ಮೆಚ್ಚಿಕೊಂಡಿದ್ದಾರೆ. ‘ನಿಮ್ಮ ಅಪ್ಪ ಇರಬೇಕಾಗಿತ್ತು. ಇದನ್ನು ಅವರು ನೋಡಬೇಕಾಗಿತ್ತು. ನೋಡಿದ್ದರೆ ತುಂಬ ಹೆಮ್ಮೆ ಪಡುತ್ತಿದ್ದರು. ಮೇಲಿಂದ ನೋಡಿ ಅಷ್ಟೇ ಆಶೀರ್ವಾದ ಮಾಡುತ್ತಿರುತ್ತಾರೆ. ನಾನು ಇಂದು ಇಲ್ಲಿ ನಿಂತಿದ್ದಕ್ಕೆ ಕಾಶಿನಾಥ್ ಸರ್ ಕಾರಣ’ ಎಂದು ಉಪೇಂದ್ರ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More