‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  

Updated on: Sep 18, 2024 | 8:18 AM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಮೂರು ತಿಂಗಳಿಗೂ ಹೆಚ್ಚು ಸಮಯವಾಗಿದೆ. ದರ್ಶನ್ ಪ್ರಕರಣದ ಬಗ್ಗೆ ಚಿತ್ರರಂಗದ ಹಲವರು ಹಲವು ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಉಪೇಂದ್ರ ಅವರು ಈ ಬಗ್ಗೆ ಮಾತನಾಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಪ್ರಕರಣದ ವಿಚಾರಣೆ ಶೀಘ್ರವೇ ನಡೆಯಬೇಕಿದೆ. ದರ್ಶನ್ ಬಗ್ಗೆ ಉಪೇಂದ್ರ ಮಾತನಾಡಿದ್ದಾರೆ. ‘ಪ್ರಕರಣದ ಬಗ್ಗೆ ಕೇಳಿದಾಗ ಬೇಸರ ಆಯಿತು. ಒಂದೇ ಇಂಡಸ್ಟ್ರಿಯಲ್ಲಿ ಇದ್ದೇವೆ ಎಂದಾಗ ಸಹಜವಾಗಿ ಬೇಸರ ಆಗೇ ಆಗುತ್ತದೆ. ಒಂದಲ್ಲಾ ಒಂದು ದಿನ ಸತ್ಯ ಹೊರಗೆಬರಲೇಬೇಕು. ಪ್ರಕರಣ ವಿಚಾರಣೆ ಹಂತದಲ್ಲಿ ಇದೆ. ಎಲ್ಲದರಲ್ಲೂ ಪಾರದರ್ಶಕತೆ ಇರಲಿ’ ಎಂದು ಕೋರಿಕೊಂಡಿದ್ದಾರೆ ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More