AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎ’ ಸಿನಿಮಾ ಮರು ಬಿಡುಗಡೆ, ಚಿತ್ರಮಂದಿರದಲ್ಲಿ ಅಭಿಮಾನಿಗಳ ಹಾವಳಿ ಹೀಗಿತ್ತು

ಉಪೇಂದ್ರ ನಿರ್ದೇಶಿಸಿ, ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದ ‘ಎ’ ಸಿನಿಮಾ 26 ವರ್ಷಗಳ ಬಳಿಕ ಇಂದು (ಮೇ 17) ಮರು ಬಿಡುಗಡೆ ಆಗಿದೆ. ಪ್ರೇಕ್ಷಕರು ಚಿತ್ರಮಂದಿರಗಳಿಗೆ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಚಿತ್ರಮಂದಿರಗಳ ಒಳಗೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಮಂಜುನಾಥ ಸಿ.
|

Updated on: May 17, 2024 | 11:03 AM

Share

ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿದ್ದ ‘ಎ’ ಸಿನಿಮಾ 26 ವರ್ಷಗಳ ಬಳಿಕ ಮರು ಬಿಡುಗಡೆ ಆಗಿದೆ. ಮೊದಲ ದಿನವೇ ಅಭಿಮಾನಿಗಳು ಚಿತ್ರಮಂದಿರಕ್ಕೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆ ಬೆಂಗಳೂರಿನ ಹಲವೆಡೆ ಮಳೆ ಬಿತ್ತಾದರೂ ಅದರ ನಡುವೆಯೇ ಜನ ಚಿತ್ರಮಂದಿರಗಳಿಗೆ ಬಂದು ಸಿನಿಮಾ ನೋಡಿದ್ದಾರೆ. ಸಿನಿಮಾ ಪ್ರಾರಂಭವಾಗುತ್ತಿದ್ದಂತೆ ಸ್ಕ್ರೀನ್ ಮುಂದೆ ಬಂದು ಡ್ಯಾನ್ಸ್ ಮಾಡಿದ್ದಾರೆ. ಉಪೇಂದ್ರ ತೆರೆಯ ಮೇಲೆ ಕಾಣುತ್ತಿದ್ದಂತೆ ಆರತಿ ಮಾಡಿ ಸಂಭ್ರಮಿಸಿದ್ದಾರೆ. ಚಿತ್ರಮಂದಿರಗಳ ಮುಂದೆ ಪಟಾಕಿ ಹೊಡೆದಿದ್ದಾರೆ, ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದ್ದಾರೆ. ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ ಇಂದು ‘ಎ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಬಹುತೇಕ ಎಲ್ಲ ಚಿತ್ರಮಂದಿರಗಳಲ್ಲಿಯೂ ಇದೇ ರೀತಿಯ ದೃಶ್ಯಗಳು ಪುನರಾವರ್ತನೆಯಾಗಿವೆ. ಉಪೇಂದ್ರ ಸಿನಿಮಾಕ್ಕೆ ಮಹಿಳೆಯರು ಬರುವುದಿಲ್ಲ ಎಂಬ ಆಪಾದನೆ 20 ವರ್ಷಗಳ ಹಿಂದೆ ಇತ್ತು. ಆದರೆ ‘ಎ’ ಸಿನಿಮಾಕ್ಕೆ ಹಲವು ಚಿತ್ರಮಂದಿರಗಳಲ್ಲಿ ಮಹಿಳೆಯರು ಬಂದಿದ್ದು ವಿಶೇಷವಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ