AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎ’ ಸಿನಿಮಾ ಮರು ಬಿಡುಗಡೆ, ಚಿತ್ರಮಂದಿರದಲ್ಲಿ ಅಭಿಮಾನಿಗಳ ಹಾವಳಿ ಹೀಗಿತ್ತು

ಉಪೇಂದ್ರ ನಿರ್ದೇಶಿಸಿ, ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದ ‘ಎ’ ಸಿನಿಮಾ 26 ವರ್ಷಗಳ ಬಳಿಕ ಇಂದು (ಮೇ 17) ಮರು ಬಿಡುಗಡೆ ಆಗಿದೆ. ಪ್ರೇಕ್ಷಕರು ಚಿತ್ರಮಂದಿರಗಳಿಗೆ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಚಿತ್ರಮಂದಿರಗಳ ಒಳಗೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಮಂಜುನಾಥ ಸಿ.
|

Updated on: May 17, 2024 | 11:03 AM

Share

ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿದ್ದ ‘ಎ’ ಸಿನಿಮಾ 26 ವರ್ಷಗಳ ಬಳಿಕ ಮರು ಬಿಡುಗಡೆ ಆಗಿದೆ. ಮೊದಲ ದಿನವೇ ಅಭಿಮಾನಿಗಳು ಚಿತ್ರಮಂದಿರಕ್ಕೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆ ಬೆಂಗಳೂರಿನ ಹಲವೆಡೆ ಮಳೆ ಬಿತ್ತಾದರೂ ಅದರ ನಡುವೆಯೇ ಜನ ಚಿತ್ರಮಂದಿರಗಳಿಗೆ ಬಂದು ಸಿನಿಮಾ ನೋಡಿದ್ದಾರೆ. ಸಿನಿಮಾ ಪ್ರಾರಂಭವಾಗುತ್ತಿದ್ದಂತೆ ಸ್ಕ್ರೀನ್ ಮುಂದೆ ಬಂದು ಡ್ಯಾನ್ಸ್ ಮಾಡಿದ್ದಾರೆ. ಉಪೇಂದ್ರ ತೆರೆಯ ಮೇಲೆ ಕಾಣುತ್ತಿದ್ದಂತೆ ಆರತಿ ಮಾಡಿ ಸಂಭ್ರಮಿಸಿದ್ದಾರೆ. ಚಿತ್ರಮಂದಿರಗಳ ಮುಂದೆ ಪಟಾಕಿ ಹೊಡೆದಿದ್ದಾರೆ, ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದ್ದಾರೆ. ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ ಇಂದು ‘ಎ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಬಹುತೇಕ ಎಲ್ಲ ಚಿತ್ರಮಂದಿರಗಳಲ್ಲಿಯೂ ಇದೇ ರೀತಿಯ ದೃಶ್ಯಗಳು ಪುನರಾವರ್ತನೆಯಾಗಿವೆ. ಉಪೇಂದ್ರ ಸಿನಿಮಾಕ್ಕೆ ಮಹಿಳೆಯರು ಬರುವುದಿಲ್ಲ ಎಂಬ ಆಪಾದನೆ 20 ವರ್ಷಗಳ ಹಿಂದೆ ಇತ್ತು. ಆದರೆ ‘ಎ’ ಸಿನಿಮಾಕ್ಕೆ ಹಲವು ಚಿತ್ರಮಂದಿರಗಳಲ್ಲಿ ಮಹಿಳೆಯರು ಬಂದಿದ್ದು ವಿಶೇಷವಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?