ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು

Updated on: Sep 17, 2024 | 4:35 PM

Upendra-Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿದೆ. ಈ ಹಿಂದೆ ಪ್ರಕರಣದ ಪಾರದರ್ಶಕ ವಿಚಾರಣೆಗೆ ಒತ್ತಾಯಿಸಿ ಪೋಸ್ಟ್ ಹಾಕಿದ್ದ ಉಪೇಂದ್ರ ಇದೀಗ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಮೂರು ತಿಂಗಳಿಗೂ ಹೆಚ್ಚು ಸಮಯವಾಗಿದೆ. ದರ್ಶನ್ ಪ್ರಕರಣದ ಬಗ್ಗೆ ಚಿತ್ರರಂಗದ ಹಲವರು ಹಲವು ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಟ್ವೀಟ್ ಮಾಡಿದ್ದ ಉಪೇಂದ್ರ, ದರ್ಶನ್ ಪ್ರಕರಣದ ತನಿಖೆ, ವಿಚಾರಣೆ ಎಲ್ಲವೂ ಪಾರದರ್ಶಕವಾಗಿರಬೇಕು ಎಂದಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಉಪೇಂದ್ರ ತಮ್ಮ ಅಭಿಪ್ರಾಯವನ್ನು ಪುನರಾವರ್ತಿಸಿರುವ ಜೊತೆಗೆ ದರ್ಶನ್ ಪ್ರಕರಣದ ಬಗ್ಗೆ ವೈಯಕ್ತಿಕ ಅಭಿಪ್ರಾಯವನ್ನು ಸಹ ಹಂಚಿಕೊಂಡಿದ್ದಾರೆ. ಅಲ್ಲದೆ ಪ್ರಕರಣದ ಬೆಳಕಿಗೆ ಬಂದಾಗ ತಮಗೆ ಅನಿಸಿದ ವಿಷಯಗಳ ಬಗ್ಗೆಯೂ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More