AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

ಮದನ್​ ಕುಮಾರ್​
|

Updated on: Dec 29, 2024 | 8:05 PM

Share

ನಟ ಉಪೇಂದ್ರ ಅವರಿಗೆ ‘ಯುಐ’ ಸಿನಿಮಾ ಮೂಲಕ ಗೆಲುವು ಸಿಕ್ಕಿದೆ. ಅವರು ನಿರ್ದೇಶನ ಮಾಡಿದ ಸಿನಿಮಾ ಎಂಬ ಕಾರಣಕ್ಕೆ ‘ಯುಐ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಈ ಸಿನಿಮಾದ ಯಶಸ್ಸಿನ ಬಳಿಕ ನಟ, ನಿರ್ದೇಶಕ ಉಪೇಂದ್ರ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.

ಉಪೇಂದ್ರ ನಿರ್ದೇಶನ ಮಾಡಿದ ‘ಯುಐ’ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಉತ್ತಮ ಪ್ರದರ್ಶನ ಕಂಡಿರುವುದರಿಂದ ಉಪೇಂದ್ರ ಅವರ ಫ್ಯಾನ್ ಫಾಲೋಯಿಂಗ್ ಹೆಚ್ಚಿದೆ. ಇಂದು (ಡಿಸೆಂಬರ್​ 29) ಉಪೇಂದ್ರ ಅವರು ಉಡುಪಿ ಕೃಷ್ಣನ ದರ್ಶನ ಪಡೆದಿದ್ದಾರೆ. ಅವರ ಜೊತೆ ಲಹರಿ ವೇಲು ಕೂಡ ಸಾಥ್ ನೀಡಿದರು. ದೇವಸ್ಥಾನದಲ್ಲಿ ಉಪೇಂದ್ರ ಅವರನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More