ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆಗಳನ್ನು ಬಂದ್ ಮಾಡಿ ವಿಭಿನ್ನ ಪ್ರತಿಭಟನೆ
ಯಾದಗಿರಿಯ ಗುರುಮಠಕಲ್ ತಾಲ್ಲೂಕಿನ ಗೂರನೂರಿನಲ್ಲಿ ಮೇಲ್ವರ್ಗದವರು ದಲಿತರಿಗೆ ಜಮೀನುಗಳಿಗೆ ಹೋಗುವ ದಾರಿಯನ್ನು ಎರಡು ವರ್ಷಗಳಿಂದ ಬಂದ್ ಮಾಡಿದ್ದಾರೆ. ಅಧಿಕಾರಿಗಳ ಸ್ಪಂದನೆ ಇಲ್ಲದ ಕಾರಣ, ನ್ಯಾಯಕ್ಕಾಗಿ ಗ್ರಾಮಸ್ಥರು ಗ್ರಾಮ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಿ ಹೋರಾಟ ನಡೆಸುತ್ತಿದ್ದಾರೆ. ಇದರಿಂದ ಶಾಲಾ ಮಕ್ಕಳು ಸಹ ತೊಂದರೆ ಅನುಭವಿಸಿದ್ದಾರೆ.
ಯಾದಗಿರಿ, ಜೂನ್ 19: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗೂರನೂರು ಗ್ರಾಮದಲ್ಲಿ ಮೇಲ್ವರ್ಗದವರಿಂದ ದಲಿತರ ಮೇಲೆ ದಬ್ಬಾಳಿಕೆ ಆರೋಪ ಕೇಳಿಬಂದಿದೆ. ದಲಿತ ಕುಟುಂಬಗಳು ಜಮೀನುಗಳಿಗೆ ಹೋಗುವ ದಾರಿಯನ್ನು ಮೇಲ್ವರ್ಗದ ಎರಡು ಕುಟುಂಬಗಳು ಬಂದ್ ಮಾಡಿದ್ದು, ಕಳೆದ ಎರಡು ವರ್ಷಗಳಿಂದ ಇದೇ ಸ್ಥಿತಿ ಇಲ್ಲಿದೆ. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಲಾಗಿದ್ದು, ಇದರಿಂದ ಬೇಸತ್ತ ಗ್ರಾಮಸ್ಥರು, ದಲಿತರ ಜೊತೆ ಕೈಜೋಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದು, ರಸ್ತೆಗಳು ಬಂದ್ ಆಗಿರುವ ಕಾರಣ ಗ್ರಾಮದ ಮಕ್ಕಳು ಶಾಲೆಗೆ ಹೋಗಲು ಜಮೀನುಗಳ ಮೂಲಕ ಸಂಚರಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
