ಜೆಡಿಎಸ್-ಬಿಜೆಪಿ ಮೈತ್ರಿ ಎಫೆಕ್ಟ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಕೆಸಿ ನಾರಾಯಣ ಗೌಡ ತಯಾರಿ!

ಅರುಣ್​ ಕುಮಾರ್​ ಬೆಳ್ಳಿ

Updated on: Feb 08, 2024 | 11:45 AM

ಮೂಲಗಳ ಪ್ರಕಾರ ಅವರ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಬೇಡಿಕೆಯಿಟ್ಟಿದ್ದಾರೆ ಆದರೆ ಸಿದ್ದರಾಮಯ್ಯ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ. ಸ್ಥಾನಮಾನದ ಆಸೆಯಿದ್ದರೆ ಬರೋದು ಬೇಡ ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರಂತೆ. ಜೆಡಿಎಸ್ ಮತ್ತು ಬಿಜೆಪಿ ನಡುವೆ ಏರ್ಪಟ್ಟಿರುವ ಮೈತ್ರಿ ಮೂಲತಃ ಜೆಡಿಎಸ್ ಪಕ್ಷದವರಾಗಿರುವ ಗೌಡರಲ್ಲಿ ಬೇಸರ ಮೂಡಿಸಿದೆ.

ಮಂಡ್ಯ: ಮಾಜಿ ಸಚಿವ ಮತ್ತು ಮಂಡ್ಯ ಭಾಗದಲ್ಲಿ ಬಿಜೆಪಿಯ ಪ್ರಭಾವಿ ನಾಯಕ ಕೆಸಿ ನಾರಾಯಣಗೌಡ (KC Narayana Gowda) ಗೊಂದಲದಲ್ಲಿದ್ದಾರೆ. ವಿಧಾನಸಭಾ ಚುನಾವಣೆ (Assembly polls) ಸಮಯದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರುವ ವದಂತಿ ದಟ್ಟವಾಗಿ ಹರಡಿತ್ತು ಮತ್ತು ಸಿದ್ದರಾಮಯ್ಯ ( Siddaramaiah) ಟಿಕೆಟ್ ನೀಡುವ ಭರವಸೆಯನ್ನೂ ನೀಡಿದ್ದರು, ಆದರೆ ಅವರು ಕಾಂಗ್ರೆಸ್ ಸೇರದೆ ಬಿಜೆಪಿಯಿಂದಲೇ ಸ್ಪರ್ಧಿಸಿ ಸೋತರು. ನಂತರದ ಕೆಲ ತಿಂಗಳು ಕಾಣೆಯಾಗಿದ್ದ ಗೌಡರು ಲೋಕಸಭಾ ಚುನಾವಣೆ ಹತ್ತಿರ ಬಂದಿರುವ ಸಂದರ್ಭದಲ್ಲಿ ಮತ್ತೇ ಸಕ್ರಿಯರಾಗಿದ್ದಾರೆ. ಅವರ ಬಗ್ಗೆ ಲೇಟೆಸ್ಟ್ ಸುದ್ದಿ ಏನು ಗೊತ್ತಾ? ಕಾಂಗ್ರೆಸ್ ಸೇರುವ ಬಯಕೆ ಅವರು ಪುನಃ ವ್ಯಕ್ತಪಡಿಸಿದ್ದು ಅದಕ್ಕೆ ಪೂರ್ವಭಾವಿಯಾಗಿ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಮೂಲಗಳ ಪ್ರಕಾರ ಅವರ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಬೇಡಿಕೆಯಿಟ್ಟಿದ್ದಾರೆ ಆದರೆ ಸಿದ್ದರಾಮಯ್ಯ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ. ಸ್ಥಾನಮಾನದ ಆಸೆಯಿದ್ದರೆ ಬರೋದು ಬೇಡ ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರಂತೆ. ಜೆಡಿಎಸ್ ಮತ್ತು ಬಿಜೆಪಿ ನಡುವೆ ಏರ್ಪಟ್ಟಿರುವ ಮೈತ್ರಿ ಮೂಲತಃ ಜೆಡಿಎಸ್ ಪಕ್ಷದವರಾಗಿರುವ ಗೌಡರಲ್ಲಿ ಬೇಸರ ಮೂಡಿಸಿದೆ. ಅವರಿಗೆ ಈಗ ಜೆಡಿಎಸ್ ನಾಯಕನ್ನು ಕಂಡರಾಗುತ್ತಿಲ್ಲ. ಹಾಗಾಗೇ ಬದಲಾವಣೆಗಾಗಿ ಹುನ್ನಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.