AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದಿಂದ ದಿನವಿಡೀ ಸರತಿ ಸಾಲಲ್ಲಿ ಕಾದರೂ ಸಿಗದ ಯೂರಿಯಾ ಮತ್ತು ಡಿಎಪಿ, ಯಾದಗಿರಿ ರೈತ ಕಂಗಾಲು

ವಾರದಿಂದ ದಿನವಿಡೀ ಸರತಿ ಸಾಲಲ್ಲಿ ಕಾದರೂ ಸಿಗದ ಯೂರಿಯಾ ಮತ್ತು ಡಿಎಪಿ, ಯಾದಗಿರಿ ರೈತ ಕಂಗಾಲು

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 09, 2025 | 10:18 AM

Share

ಸುತ್ತಮುತ್ತಲಿನ ಭಾಗಗಳ ರೈತರು ಒಂದು ವಾರದಿಂದ ಶಹಾಪುರದಲ್ಲಿರುವ ಅಗ್ರೋ ಕೇಂದ್ರಕ್ಕೆ ಎಡತಾಕುತ್ತಿದ್ದಾರೆ ಆದರೆ ಯೂರಿಯಾ ಮಾತ್ರ ಸಿಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದರೆ ಅನ್ನ ನೀರು ಬಿಟ್ಟು ಬೆಳಗ್ಗೆಯಿಂದ ಸಾಯಂಕಾಲದವರೆಗೆ ಕಾಯ್ದು ಗೊಬ್ಬರ ಸಿಗದೆ ವಾಪಸ್ಸು ಊರುಗಳಿಗೆ ಹೋಗುವ ಜನರ ಬಗ್ಗೆ ಯಾರು ಯೋಚಿಸುತ್ತಾರೆ? ಸರ್ಕಾರಕ್ಕಂತೂ ತಮ್ಮ ಕಷ್ಟದ ಪರಿವೆಯೇ ಇಲ್ಲ ಎಂದು ರೈತರು ಹೇಳುತ್ತಾರೆ.

ಯಾದಗಿರಿ, ಆಗಸ್ಟ್ 9: ಈ ಸಲ ಮಳೆ ಚೆನ್ನಾಗಿ ಆಗುತ್ತಿದೆ ಅಂತ ಬಂಪರ್ ಬೆಳೆಯ ನಿರೀಕ್ಷೆಯಲ್ಲಿದ್ದ ಯಾದಗಿರಿ ಭಾಗದ (Yadgir region) ರೈತರು ಯೂರಿಯಾ ಮತ್ತು ಡಿಎಪಿಯ ಅಭಾವ ತಲೆದೋರಿರುವುದರಿಂದ ಕಂಗೆಟ್ಟಿದ್ದಾರೆ. ಜಿಲ್ಲೆಯ ಶಹಾಪುರ ಪಟ್ಟಣದಲ್ಲಿರುವ ಅಗ್ರೋ ಕೇಂದ್ರವೊಂದರ ಮುಂದೆ ಬೆಳಗ್ಗೆ 5 ಗಂಟೆಯಿಂದ ಸಾಲುಗಟ್ಟಿ ಸಿಗದ ರಸಗೊಬ್ಬರಕ್ಕಾಗಿ ಕಾಯುತ್ತಿರುವ ರೈತ ಮಹಿಳೆ ಮತ್ತು ರೈತರು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಬ್ಬರಿಗೆ ಒಂದು ಚೀಲ ಮಾತ್ರ ಗೊಬ್ಬರ ಕೊಡುತ್ತಿರುವುದರಿಂದ ರೈತ ಮಹಿಳೆಯರು ಶಾಲೆಗೆ ಹೋಗುವ ತಮ್ಮ ಮಕ್ಕಳನ್ನೂ ಕರೆತಂದು ಸರತಿ ಸಾಲಿನಲ್ಲಿ ಕೂರಿಸಿದ್ದಾರೆ.

ಇದನ್ನೂ ಓದಿ:  Explainer: ನರೇಂದ್ರ ಮೋದಿಯವರ ಸರ್ಕಾರ ಡಿಎಪಿ ಮೇಲಿನ ಸಬ್ಸಿಡಿಯನ್ನು ಶೇಕಡಾ 140ರಷ್ಟು ಏರಿಸಿದ್ದು ಯಾಕೆ ಗೊತ್ತಾ?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More