AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಬಸ್ ನಿಲ್ದಾಣ ಆವರಣದಲ್ಲಿ ಮೂತ್ರ ವಿಸರ್ಜನೆ.. ಸಾರ್ವಜನಿಕರಿಗೆ ದಂಡದ ಬಿಸಿ ಮುಟ್ಟಿಸಿದ ಸಿಬ್ಬಂದಿ

ಧಾರವಾಡ ಬಸ್ ನಿಲ್ದಾಣ ಆವರಣದಲ್ಲಿ ಮೂತ್ರ ವಿಸರ್ಜನೆ.. ಸಾರ್ವಜನಿಕರಿಗೆ ದಂಡದ ಬಿಸಿ ಮುಟ್ಟಿಸಿದ ಸಿಬ್ಬಂದಿ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 04, 2023 | 5:29 PM

Share

ಧಾರವಾಡ: ಬಯಲಿನಲ್ಲಿ ಮೂತ್ರ ವಿಸರ್ಜನೆ ವಿಚಾರ ಸಾರ್ವಜನಿಕರೊಬ್ಬರು ಮತ್ತು ಕೆಎಸ್ಆರ್‌ಟಿಸಿ ಸಿಬ್ಬಂದಿ ಮಧ್ಯೆ ಕಿರಿಕ್ ಆಗಿದೆ. ಬಯಲು ಶೌಚ ಮಾಡಿದವರಿಗೆ ದಂಡ ವಿಧಿಸುವ ವ್ಯವಸ್ಥೆಯಿದ್ದು, ದಂಡ ಕೊಡಲು ಜನ ನಿರಾಕರಿಸಿದ್ದಾರೆ.

ಧಾರವಾಡ: ಬಯಲಿನಲ್ಲಿ ಮೂತ್ರ ವಿಸರ್ಜನೆ ವಿಚಾರ ಸಾರ್ವಜನಿಕರೊಬ್ಬರು ಮತ್ತು ಕೆಎಸ್ಆರ್‌ಟಿಸಿ ಸಿಬ್ಬಂದಿ ಮಧ್ಯೆ ಕಿರಿಕ್ ಆಗಿದೆ. ಬಯಲು ಶೌಚ ಮಾಡಿದವರಿಗೆ ದಂಡ ವಿಧಿಸುವ ವ್ಯವಸ್ಥೆಯಿದ್ದು, ದಂಡ ಕೊಡಲು ಜನ ನಿರಾಕರಿಸಿದ್ದಾರೆ. ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ಇಂದು ಮಂಗಳವಾರ ಈ ಘಟನೆ ನಡೆದಿದೆ. ಜನರಿಗೆ ದಂಡ ಹಾಕುತ್ತಿದ್ದ ಸಿಬ್ಬಂದಿ ಜೊತೆ ದಂಡದ ವಿಚಾರವಾಗಿ ಕಿತ್ತಾಟ ನಡೆದಿದೆ. ಪರಸ್ಪರರು ಕೈ ಕೈ ಸಹ ಮಿಲಾಯಿಸಿದ್ದಾರೆ.

ಮಹಿಳೆಯೊಬ್ಬರು ದಂಡದ ಹಣ ಕೊಡಲಿಲ್ಲವೆಂದು ಆ ಮಹಿಳೆಯ ಜೊತೆಗೂ ಸಿಬ್ಬಂದಿ ಕಿರಿಕ್ ಮಾಡಿದ್ದಾರೆ. ಈ ಕಿತ್ತಾಟದ ವಿಡಿಯೋ ವೈರಲ್ ಆಗಿದೆ. ನಿಲ್ದಾಣದಲ್ಲಿ ಸುಲಭ ಶೌಚಾಲಯದ ವ್ಯವಸ್ಥೆ ಇದ್ದರೂ ನಿಲ್ದಾಣದ ಗೋಡೆಗೆ ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯವಾಗಿದೆ. ಹೀಗೆ ಮೂತ್ರ ವಿಸರ್ಜನೆ ಮಾಡಿದವರಿಗೆ ಸಿಬ್ಬಂದಿ ದಂಡ ಹಾಕಿ, ಬಿಸಿ ಮುಟ್ಟಿಸುತ್ತಿದ್ದಾರೆ. ಈ ವೇಳೆ ದಂಡ ಕೊಡಲು ಕೆಲವರು ಹಿಂದೇಟು ಹಾಕಿದ್ದಾರೆ. ಈ ಹಂತದಲ್ಲಿ ಒಬ್ಬ ಯುವಕನ ಜೊತೆಯೂ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದಾರೆ.

 

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು