ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ; ತಮ್ಮದೇ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ
Rahul Gandhi And Kharge
Image Credit source: PTI

‘ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ’; ತಮ್ಮದೇ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ

Updated on: Aug 10, 2026 | 9:06 PM

ಜಾರ್ಖಂಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. "ಜಾರ್ಖಂಡ್‌ನಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡಿರುವುದು ತಪ್ಪು. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ವಿದ್ಯಾರ್ಥಿಗಳಿಗಿದ್ದು, ಮಾತುಕತೆಯಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ" ಎಂದು ಹೇಳಿದ್ದಾರೆ.

ರಾಂಚಿ, ಆಗಸ್ಟ್ 10: ಜಾರ್ಖಂಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಲಾಠಿಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ತೀವ್ರವಾಗಿ ಖಂಡಿಸಿದ್ದಾರೆ. ಜಾರ್ಖಂಡ್​​ನಲ್ಲಿ ಜೆಎಂಎಂ ನೇತೃತ್ವದ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದಲ್ಲಿದೆ. ಇದೀಗ ತಮ್ಮದೇ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಧ್ವನಿಯೆತ್ತಿದ್ದಾರೆ. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳು ಮತ್ತು ಪ್ರತಿಭಟನೆಯ ವಿರುದ್ಧ ಬಲಪ್ರಯೋಗ ಮಾಡುವುದು ಸಂಪೂರ್ಣವಾಗಿ ತಪ್ಪು. ಸರ್ಕಾರವು ವಿದ್ಯಾರ್ಥಿಗಳ ಧ್ವನಿಯನ್ನು ನಿಯಂತ್ರಿಸಲು ಯತ್ನಿಸುವ ಬದಲು ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದಿದ್ದಾರೆ.

ಜಾರ್ಖಂಡ್​​ನಲ್ಲಿ ಪರೀಕ್ಷಾ ಪಾರದರ್ಶಕತೆ, ಉದ್ಯೋಗಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನಾನಿರತ ಯುವಕರ ಮೇಲಿನ ಪೊಲೀಸ್ ಕ್ರಮವು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳೊಂದಿಗೆ ಜಾರ್ಖಂಡ್ ಸರ್ಕಾರ ಮಾತುಕತೆಯನ್ನು ಮುಂದುವರಿಸಿ, ಅವರ ಕಳವಳಗಳನ್ನು ಶೀಘ್ರವೇ ಪರಿಹರಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us