ಅಪರೂಪಕ್ಕೆ ಸಿಟ್ಟಿಗೆದ್ದ ಸಚಿವ ರಾಮಲಿಂಗಾರೆಡ್ಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡ ಕಾರಿದರು!

ರಾಜ್ಯದ ರೈತರು ಮತ್ತು ಜನರ ಬಗ್ಗೆ ಅವರಿಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ತಮ್ಮೊಂದಿಗೆ ಕೈ ಜೋಡಿಸುತ್ತಿದ್ದರು. ಅದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಸಿಗದಿರುವುದು ಕಂಡು ಅವರು ವಿಕೃತಾನಂದ ಅನುಭವಿಸುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರು ವಿಘ್ನ ಸಂತೋಷಿಗಳು, ರಾಜ್ಯದಲ್ಲಿ ಅವರು ಸರ್ಕಾರ ನಡೆಸುತ್ತಿದ್ದಾಗ, ಅವರಪ್ಪನ ಮನೆಯಿಂದ ಹಣ ತರುತ್ತಿದ್ದರೇ ಎಂದು ರೆಡ್ಡಿ ಉಗ್ರರಾಗಿ ಪ್ರಶ್ನಿಸಿದರು.

ಅಪರೂಪಕ್ಕೆ ಸಿಟ್ಟಿಗೆದ್ದ ಸಚಿವ ರಾಮಲಿಂಗಾರೆಡ್ಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡ ಕಾರಿದರು!
|

Updated on: Feb 06, 2024 | 6:46 PM

ಬೆಂಗಳೂರು: ಸಾಮಾನ್ಯವಾಗಿ ಮಾಧ್ಯಮಗಳ ಜೊತೆ ಮಾತಾಡುವಾಗ ತಾಳ್ಮೆ ಕಳೆದುಕೊಳ್ಳದೆ ಸಂಯಮದಿಂದ ಮಾತಾಡುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಇವತ್ತು ದೆಹಲಿಗೆ ತೆರಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ (KIA) ಬಂದಾಗ ಮಾಧ್ಯಮಗಳ ಮುಂದೆ ಬೆಂಕಿಯುಗುಳಿದರು. ಕಾಂಗ್ರೆಸ್ ಸರ್ಕಾರ ನಾಳೆ ದೆಹಲಿಯಲ್ಲಿ ಅನುದಾನ ಹಂಚಿಕೆ ವಿಷಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆಸಲಿರುವ ಪ್ರತಿಭಟನೆ ವಿರುದ್ಧ ಟೀಕೆ ಮಾಡುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇಲ್ಲ, ತಮ್ಮ ಧರಣಿಯನ್ನು ಪ್ರಶ್ನಿಸುವ ಅವರಿಗೆ ನಾಚಿಕೆಯಾಗಬೇಕು ಎಂದು ಗುಡುಗಿದರು. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಇವರಿಗೆ ಕಾಣುತ್ತಿಲ್ಲವೇ? 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತ ಅಂತ ಘೋಷಿಸಲಾಗಿದೆ. ಕರ್ನಾಟಕದಿಂದ 4.5 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹದ ಹಣ ಹೋಗುತ್ತದೆ. ಆದರೆ ರಾಜ್ಯಕ್ಕೆ ಸಿಗುತ್ತಿರುವ ಅನುದಾನ ತೀರ ಕಡಿಮೆ ಅನ್ನೋದು ಬಿಜೆಪಿಯವರಿಗೆ ಗೊತ್ತಿಲ್ಲವೇ?  ಎಂದು ರೆಡ್ಡಿ ಕೇಳಿದರು.

ರಾಜ್ಯದ ರೈತರು ಮತ್ತು ಜನರ ಬಗ್ಗೆ ಅವರಿಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ತಮ್ಮೊಂದಿಗೆ ಕೈ ಜೋಡಿಸುತ್ತಿದ್ದರು. ಅದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಸಿಗದಿರುವುದು ಕಂಡು ಅವರು ವಿಕೃತಾನಂದ ಅನುಭವಿಸುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರು ವಿಘ್ನ ಸಂತೋಷಿಗಳು, ರಾಜ್ಯದಲ್ಲಿ ಅವರು ಸರ್ಕಾರ ನಡೆಸುತ್ತಿದ್ದಾಗ, ಅವರಪ್ಪನ ಮನೆಯಿಂದ ಹಣ ತರುತ್ತಿದ್ದರೇ ಎಂದು ರೆಡ್ಡಿ ಉಗ್ರರಾಗಿ ಪ್ರಶ್ನಿಸಿದರು. ಖಜಾನೆಯಲ್ಲಿ ಹಣವಿದೆಯೋ ಇಲ್ಲವೋ ಅನ್ನೋದು ಪ್ರಶ್ನೆಯಲ್ಲ, ಇಲ್ಲಿ ಪ್ರಶ್ನೆಯಿರೋದು ನಮ್ಮ ಪಾಲು ನಮಗೆ ಬರಬೇಕು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ