ಗೋರಖನಾಥ ದೇವಾಲಯದಲ್ಲಿ ವಿಜಯದಶಮಿ ವಿಶೇಷ ಪೂಜೆ ನೆರವೇರಿಸಿದ ಸಿಎಂ ಯೋಗಿ ಆದಿತ್ಯನಾಥ್

Updated on: Oct 02, 2025 | 11:22 PM

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋರಖನಾಥ ದೇವಾಲಯದಲ್ಲಿ ವಿಜಯದಶಮಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಸಾರ್ವಜನಿಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಗೋರಖನಾಥ ದೇವಸ್ಥಾನದಲ್ಲಿ ವಿಜಯದಶಮಿ ಸಂದರ್ಭದಲ್ಲಿ ಗೋರಕ್ಷಪೀಠಾಧೀಶ್ವರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಿವನ ಅವತಾರವಾದ ಮಹಾಯೋಗಿ ಗುರು ಗೋರಖನಾಥರ ವಿಶೇಷ ಪೂಜೆ ಮತ್ತು ಆಚರಣೆಗಳನ್ನು ನೆರವೇರಿಸಿದರು.

ಗೋರಖ್‌ಪುರ, ಅಕ್ಟೋಬರ್ 2: ಗೋರಖನಾಥ ದೇವಸ್ಥಾನದಲ್ಲಿ ವಿಜಯದಶಮಿಯಾದ ಇಂದು ಗೋರಕ್ಷಪೀಠಾಧೀಶ್ವರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಿವನ ಅವತಾರವಾದ ಮಹಾಯೋಗಿ ಗುರು ಗೋರಖನಾಥರ ವಿಶೇಷ ಪೂಜೆ ಮತ್ತು ವಿಧಿವಿಧಾನಗಳನ್ನು ನೆರವೇರಿಸಿದರು. ಗೋರಕ್ಷಪೀಠಾಧೀಶ್ವರನ ಸಾಂಪ್ರದಾಯಿಕ ವೇಷಭೂಷಣವನ್ನು ಧರಿಸಿದ ಸಿಎಂ ಯೋಗಿ ಅವರು ಪೀಠದ ಆಚಾರ-ವಿಚಾರಗಳನ್ನು ವೀಕ್ಷಿಸಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More