AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರಯಾಗ್​ರಾಜ್​ಗೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ, ರೈಲು ಧ್ವಂಸ

Video: ಪ್ರಯಾಗ್​ರಾಜ್​ಗೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ, ರೈಲು ಧ್ವಂಸ

ನಯನಾ ರಾಜೀವ್
|

Updated on:Jan 28, 2025 | 2:33 PM

Share

ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಗುಂಪೊಂದು ರೈಲಿನ ಮೇಲೆ ದಾಳಿ ಮಾಡಿತು. ದಾಳಿಯ ವೇಳೆ ರೈಲು ನಿಲ್ದಾಣದಲ್ಲಿ ನಿಂತಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಹಾಕುಂಭದ ನಿಮಿತ್ತ ಪ್ರಯಾಗ್​ರಾಜ್‌ಗೆ ತೆರಳುವ ಪ್ರತಿ ರೈಲಿನಲ್ಲಿ ಭಾರಿ ಜನಸಂದಣಿ ಕಂಡುಬರುತ್ತಿರುವುದು ಗಮನಾರ್ಹವಾಗಿದೆ.

ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಗುಂಪೊಂದು ರೈಲಿನ ಮೇಲೆ ದಾಳಿ ಮಾಡಿತು. ದಾಳಿಯ ವೇಳೆ ರೈಲು ನಿಲ್ದಾಣದಲ್ಲಿ ನಿಂತಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಹಾಕುಂಭದ ನಿಮಿತ್ತ ಪ್ರಯಾಗ್​ರಾಜ್‌ಗೆ ತೆರಳುವ ಪ್ರತಿ ರೈಲಿನಲ್ಲಿ ಭಾರಿ ಜನಸಂದಣಿ ಕಂಡುಬರುತ್ತಿರುವುದು ಗಮನಾರ್ಹವಾಗಿದೆ. ದಾಳಿಕೋರರು ಕಲ್ಲು ತೂರಾಟ ನಡೆಸಿದ್ದಲ್ಲದೆ ರೈಲು ಧ್ವಂಸಗೊಳಿಸಿದ್ದಾರೆ. ರೈಲಿನೊಳಗೆ ಕುಳಿತಿದ್ದ ಜನರು ಭಯಭೀತರಾಗುವ ರೀತಿಯಲ್ಲಿ ಹೊರಗೆ ನಿಂತಿದ್ದ ಜನರು ದಾಳಿ ನಡೆಸಿದರು. ಘಟನೆಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ನಾಳೆ ಮೌನಿ ಅಮವಾಸ್ಯೆಯ ಕಾರಣ, ವಿವಿಧ ಸ್ಥಳಗಳಿಂದ ಲಕ್ಷಾಂತರ ಭಕ್ತರು ಪ್ರಯಾಗರಾಜ್‌ಗೆ ಆಗಮಿಸುತ್ತಿದ್ದಾರೆ. ಝಾನ್ಸಿ ವಿಭಾಗದ ಹರ್ಪಾಲ್‌ಪುರ ನಿಲ್ದಾಣದಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗುಂಪು ಏಕಾಏಕಿ ದಾಳಿ ನಡೆಸಿತ್ತು. ಜನರು ರೈಲಿನೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು.

ಅದು ಸಾಧ್ಯವಾಗದಿದ್ದಾಗ ಕಿಟಕಿಗಳು, ಬಾಗಿಲುಗಳನ್ನು ಒಡೆದಿದ್ದಾರೆ. ಈ ಘಟನೆಯ ನಂತರ ಸ್ಥಳೀಯ ಪೊಲೀಸರು ಮತ್ತು ರೈಲ್ವೆ ಭದ್ರತಾ ಪಡೆಗಳನ್ನು ತಕ್ಷಣವೇ ಸ್ಥಳಕ್ಕೆ ಕರೆಸಲಾಯಿತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರೈಲ್ವೆ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಎಲ್ಲಾ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 28, 2025 12:36 PM