AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಕೈ ಬಿಡುವಂತೆ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಆಟೋ ಚಾಲಕರ ಪ್ರತಿಭಟನೆ, ಸರ್ಕಾರದ ವಿರುದ್ಧ ಘೋಷಣೆ

ಶಕ್ತಿ ಯೋಜನೆ ಕೈ ಬಿಡುವಂತೆ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಆಟೋ ಚಾಲಕರ ಪ್ರತಿಭಟನೆ, ಸರ್ಕಾರದ ವಿರುದ್ಧ ಘೋಷಣೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 31, 2023 | 12:56 PM

Share

ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಬದುಕು ದುಸ್ತರಗೊಂಡಿದೆ, ತೀವ್ರ ಕಷ್ಟದ ಸ್ಥಿತಿ ಬಂದಿದೆ, ಎಂದು ಆಟೋ ಚಾಲಕರು ವಾದಿಸುತ್ತಾರೆ.

ಧಾರವಾಡ: ಒಬ್ಬರಿಗೆ ನ್ಯಾಯ ಮತ್ತೊಬ್ಬರಿಗೆ ಅನ್ಯಾಯ-ಸಿದ್ದರಾಮಯ್ಯ ಸರ್ಕಾರ  (Siddaramaiah government) ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ (Shakti Scheme) ರಾಜ್ಯದ ಮಹಿಳೆಯರು ಖುಷಿಯಾಗಿದ್ದಾರೆ. ಆದರೆ, ಆಟೋ ಚಾಲಕರು ಕಷ್ಟಪಡುವ ಸ್ಥಿತಿ ಬಂದಿದೆ. ಅವರ ವಾದವೆಂದರೆ, ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಅವರ ಬದುಕು ದುಸ್ತರಗೊಂಡಿದೆ. ಬಸ್ ಪ್ರಯಾಣ ಉಚಿತವಾಗಿರುವುದರಿಂದ ಮಹಿಳೆಯರು ಈಗ ಆಟೋಗಳಲ್ಲಿ ಪ್ರಯಾಣಿಸುವುದನ್ನು ಬಿಟ್ಟಿದ್ದಾರೆ. ಹುಬ್ಬಳ್ಳಿ-ಧಾರವಾಡದ ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ (Auto Rickshaw Drivers’ Union) ಸದಸ್ಯರು ಇಂದು ಬೆಳಗ್ಗೆ ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಶಕ್ತಿಯೋಜನೆ ಕೈಬಿಡಲೇಬೇಕು ಅಂತ ಘೋಷಣೆ ಕೂಗಿದ ಅವರು ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಅಂತ ಹೇಳಿದರು.
.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.