ಗದ್ದೆಯಲ್ಲಿ ಭತ್ತ ನಾಟಿ ಮಾಡಿ ಗಮನ ಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ

Updated on: Jul 05, 2025 | 9:27 PM

ಉತ್ತರಾಖಂಡದ ಖತಿಮಾದಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಭತ್ತ ನೆಟ್ಟು ರೈತರ ಚೈತನ್ಯ ಮತ್ತು ಸಂಪ್ರದಾಯಕ್ಕೆ ಗೌರವ ಸಲ್ಲಿಸಿದರು. ಹಳೆಯ ದಿನಗಳು ನೆನಪಾದವು ಎಂದು ಅವರು ಸಂತಸಪಟ್ಟಿದ್ದಾರೆ. ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇಂದು ಖತಿಮಾದ ನಾಗರ ತೇರೈನ ಕೆಸರಿನ ಹೊಲಕ್ಕೆ ಇಳಿದು ತಮ್ಮ ಸ್ವಂತ ಕೃಷಿ ಭೂಮಿಯಲ್ಲಿ ಭತ್ತ ನಾಟಿ ಮಾಡಲು ಹೆಜ್ಜೆ ಹಾಕಿದರು. ಸಿಎಂ ಧಾಮಿ ಸಾಂಪ್ರದಾಯಿಕ ಆಚರಣೆಗಳಲ್ಲಿ ಭಾಗವಹಿಸಿದರು, ಭೂಮಿಯಾ (ಭೂಮಿಯ ದೇವರು), ಇಂದ್ರ (ಮಳೆಯ ದೇವರು) ಮತ್ತು ಮೇಘ (ಮೋಡಗಳ ದೇವರು) ಗೆ ಪ್ರಾರ್ಥನೆ ಸಲ್ಲಿಸಿದರು.

ಡೆಹ್ರಾಡೂನ್, ಜುಲೈ 5: ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಇಂದು (ಶನಿವಾರ) ಖತಿಮಾದ ಹೊಲದಲ್ಲಿ ಭತ್ತದ ಗಿಡಗಳನ್ನು ನಾಟಿ ಮಾಡಿದ್ದಾರೆ. ಕೆಸರಿನ ಗದ್ದೆಯಲ್ಲಿ ಇಳಿದು ಭತ್ತ ನಾಟಿ ಮಾಡುವ ಮೂಲಕ ಅವರು ಗಮನಸೆಳೆದಿದ್ದಾರೆ. ಈ ಮೂಲಕ ಅವರು ರೈತರ ಪರಿಶ್ರಮಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಪುಷ್ಕರ್ ಸಿಂಗ್ ಧಾಮಿ, “ರೈತರು ನಮ್ಮ ಆರ್ಥಿಕತೆಯ ಬೆನ್ನೆಲುಬು ಮಾತ್ರವಲ್ಲದೆ ಸಂಸ್ಕೃತಿ ಮತ್ತು ಸಂಪ್ರದಾಯದ ವಾಹಕರು. ಖತಿಮಾದ ನಗರ ತೆರೈನಲ್ಲಿರುವ ನನ್ನ ಹೊಲದಲ್ಲಿ ಭತ್ತವನ್ನು ನೆಟ್ಟು ರೈತರ ಕಠಿಣ ಪರಿಶ್ರಮ, ತ್ಯಾಗ ಮತ್ತು ಸಮರ್ಪಣೆಯನ್ನು ಅನುಭವಿಸುವ ಮೂಲಕ ನಾನು ಹಳೆಯ ದಿನಗಳನ್ನು ನೆನಪಿಸಿಕೊಂಡೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More